ಉಡುಪಿ: ನಿಟ್ಟೂರು ಹನುಮಂತನಗರ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಮಳೆ ನೀರು ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದು ಮೃತಪಟ್ಟಿದ್ದಾರೆ.
ಪುತ್ತೂರು ಗ್ರಾಮದ ಅಂಬಾಗಿಲಿನ ಗುಲಾಬಿ (60) ಮೃತರು. ಮಂಗಳವಾರ ರಾತ್ರಿ ನಡೆದುಹೋಗುತ್ತಿರುವಾಗ ಕತ್ತಲಿನಲ್ಲಿ ಮಳೆ ನೀರು ಹರಿಯುತ್ತಿದ್ದ ಚರಂಡಿ ಕಾಣದೆ ಬಿದ್ದು ಸಾವನ್ನಪ್ಪಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.