ADVERTISEMENT

ಮಳೆ ಗಾಳಿ ಅಬ್ಬರ: ಮನೆಗಳಿಗೆ ಭಾಗಶಃ ಹಾನಿ

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 18:13 IST
Last Updated 16 ಜೂನ್ 2020, 18:13 IST

ಉಡುಪಿ: ಜಿಲ್ಲೆಯಾದ್ಯಂತ ಮಂಗಳವಾರವೂ ಮಳೆ ಮುಂದುವರಿದಿದೆ. ಗಾಳಿ, ಮಳೆಯ ಅಬ್ಬರಕ್ಕೆ ಹಲವು ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಬ್ರಹ್ಮಾವರದ ಕುಮ್ರಗೋಡು, ಮಣೂರಿನಲ್ಲಿ ಕೊಟ್ಟಿಗೆ ಹಾಗೂ ಮನೆ ಕುಸಿದಿದೆ. ಕುಂದಾಪುರದ ಹೊಸಂಗಡಿಯಲ್ಲಿ ಕೊಟ್ಟಿಗೆ ಮೇಲೆ ಮರ ಬಿದ್ದು ನಷ್ಟ ಸಂಭವಿಸಿದೆ.

ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 51.60 ಮಿ.ಮೀ ಮಳೆಯಾಗಿದೆ. ಜೂನ್ 20ರವರೆಗೆ ಕರಾವಳಿಯಾದ್ಯಂತ ಬಿರುಸಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.