ಉಡುಪಿ: ಜಿಲ್ಲೆಯಾದ್ಯಂತ ಮಂಗಳವಾರವೂ ಮಳೆ ಮುಂದುವರಿದಿದೆ. ಗಾಳಿ, ಮಳೆಯ ಅಬ್ಬರಕ್ಕೆ ಹಲವು ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ಬ್ರಹ್ಮಾವರದ ಕುಮ್ರಗೋಡು, ಮಣೂರಿನಲ್ಲಿ ಕೊಟ್ಟಿಗೆ ಹಾಗೂ ಮನೆ ಕುಸಿದಿದೆ. ಕುಂದಾಪುರದ ಹೊಸಂಗಡಿಯಲ್ಲಿ ಕೊಟ್ಟಿಗೆ ಮೇಲೆ ಮರ ಬಿದ್ದು ನಷ್ಟ ಸಂಭವಿಸಿದೆ.
ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 51.60 ಮಿ.ಮೀ ಮಳೆಯಾಗಿದೆ. ಜೂನ್ 20ರವರೆಗೆ ಕರಾವಳಿಯಾದ್ಯಂತ ಬಿರುಸಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.