ಉಡುಪಿ: ಜಿಲ್ಲೆಯಾದ್ಯಂತ ಸೋಮವಾರವೂ ಮಳೆ ಮುಂದುವರಿದಿದೆ. ಬಿರುಗಾಳಿ ಸಹಿತ ಸುರಿದ ಮಳೆಗೆ ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ಮನೆಗಳು ಭಾಗಶಃ ಕುಸಿದಿವೆ. ದನದ ಕೊಟ್ಟಿಗೆಗಳಿಗೆ ಹಾನಿಯಾಗಿದೆ. ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.
ಉಡುಪಿ ತಾಲ್ಲೂಕಿನ ಹಿರೇಬೆಟ್ಟು, ಕಡೆಕಾರ್, ಕುತ್ಪಾಡಿ, ಬೈಂದೂರು ತಾಲ್ಲೂಕಿನ ಉಪ್ಪುಂದ, ಹೆಬ್ರಿ ತಾಲ್ಲೂಕಿನ ಬೀಳಂಜೆ, ಶಿವಪುರ, ಕಾಪು ತಾಲ್ಲೂಕಿನ ಹೆಜಮಾಡಿ, ಬೆಳ್ಳೆ, ಮೂಡುಬೆಟ್ಟು, ಕುಂದಾಪುರ ತಾಲ್ಲೂಕಿನ ಕೊರ್ಗಿ, ಹೊಸಾಡು ಬ್ರಹ್ಮಾವರ ತಾಲ್ಲೂಕಿನ ಹೊಸಾಳ, ಹಿಲಿಯಾಣ, ಕಾರ್ಕಡ, ಕೋಟತಟ್ಟು, ಕಾರ್ಕಳ ತಾಲ್ಲೂಕಿನ ಪಳ್ಳಿಯಲ್ಲಿ ಮನೆಗಳಿಗೆ ಹಾನಿಯಾಗಿದೆ. ಮಿಯಾರು ಗ್ರಾಮದಲ್ಲಿ ಗಾಳಿ ಮಳೆಗೆ 1 ಎಕರೆ ಬಾಳೆ ತೋಟಕ್ಕೆ ಹಾನಿಯಾಗಿದೆ. ಜಿಲ್ಲೆಯಲ್ಲಿ 7.1 ಸೆಂ.ಮೀ ಮಳೆ ಬಿದ್ದಿದೆ.
ರೆಡ್ ಅಲರ್ಟ್:
ಜೂನ್ 15 ಹಾಗೂ 16ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.