ಉಡುಪಿ: ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ್ ಅವರಿಗೆ ಸೋಮವಾರ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬ್ರಹ್ಮಾವರ ತಾಲ್ಲೂಕಿನ ಕೋಟ ಗಿಳಿಯಾರು ಶಾಂಭವಿ ಶಾಲೆಯ ಆವರಣದಲ್ಲಿ ಡಾ.ಶಿವರಾಮ ಕಾರಂತ ಟ್ರಸ್ಟ್, ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಹಾಗೂ ಕೋಟತಟ್ಟು ಪಂಚಾಯಿತಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾನೂನು, ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಪ್ರಶಸ್ತಿ ನೀಡಿದರು. ಪ್ರಶಸ್ತಿಯು ಕಾರಂತರ ಬೆಳ್ಳಿಯ ಫಲಕ ಹಾಗೂ ಸನ್ಮಾನ ಪತ್ರ ಒಳಗೊಂಡಿದೆ.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಮೇಶ್ ‘ಕಾರಂತರ ಕುತೂಹಲ ಭರಿತ ಹಾಗೂ ವೈಜ್ಞಾನಿಕ ಚಿಂತನೆ ಅದ್ಭುತ. ಎಲ್ಲರಲ್ಲೂ ಅಗಾಧ ಶಕ್ತಿಯಿದ್ದು ಹೊರಗೆಳೆಯುವ ಪ್ರಯತ್ನ ಮಾಡಬೇಕು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.