ಉಡುಪಿ: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಕಂಚಿ ಕಾಮಕೋಟಿ ಪೀಠದಲ್ಲಿ ನಡೆದ ನಿಧಿ ಸಂಗ್ರಹ ಅಭಿಯಾನದಲ್ಲಿ ₹ 6 ಕೋಟಿ ದೇಣಿಗೆ ಸಂಗ್ರಹಿಸಲಾಯಿತು.
ಕಂಚಿ ಮಠದ ಭಕ್ತ ಹಾಗೂ ಉದ್ಯಮಿ ಮೋಹನ್ ಮಂದಿರ ನಿರ್ಮಾಣಕ್ಕೆ 5 ಕೋಟಿ ದೇಣಿಗೆ ನೀಡಿದರು. ಕಂಚಿ ಮಠದಿಂದ ಹಾಗೂ ಭಕ್ತರಿಂದ ಒಂದು ಕೋಟಿ ಸಂಗ್ರಹವಾಯಿತು. ಕಂಚಿ ವಿಜಯೇಂದ್ರ ಸರಸ್ವತಿ ಸ್ವಾಮೀಜಿಗಳು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಅಯೋಧ್ಯೆ ಟ್ರಸ್ಟ್ ಕೋಶಾಧಿಕಾರಿ ಗೋವಿಂದಗಿರಿ ಮಹಾರಾಜ್ ಅವರಿಗೆ ಸಂಗ್ರಹವಾದ ₹ 6 ಕೋಟಿ ಹಸ್ತಾಂತರ ಮಾಡಿದರು. ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.