ಉಡುಪಿ: ಚಂಡಮಾರುತದ ಪ್ರಭಾವದಿಂದ ಬುಧವಾರ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆ ಸುರಿಯಿತು. ಗಾಳಿ ಮಳೆಗೆ ಕುಂದಾಪುರ ತಾಲ್ಲೂಕಿನ ಬಸ್ರೂರು, ವಡೇರಹೋಬಳಿ, ಹೆಸ್ಕತ್ತೂರು, ಮೊಳಹಳ್ಳಿ, ಶಂಕರನಾರಾಯಣ, ದೇವಲ್ಕುಂದ, ಹೊಸೂರು, ನೂಜಾಡಿ, ಕಂದಾವರ, ಬ್ರಹ್ಮಾವರ ತಾಲ್ಲೂನ ಉಪ್ಪೂರು, 38 ಕಳ್ತೂರು ಗ್ರಾಮದಲ್ಲಿ ಮನೆಗಳಿಗೆ ಹಾನಿಯಾಗಿದೆ.
ರೆಡ್ ಅಲರ್ಟ್:
ಮೇ 19ರಂದು 205 ಮಿ.ಮೀಗಿಂತ ಹೆಚ್ಚು ಮಳೆ ಸುರಿಯುವ ಸಾದ್ಯತೆಗಳಿವೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. 20ರಂದು 115 ಮಿ.ಮೀ, 21ರಂದು 65 ಮಿ.ಮೀ ಮಳೆ ಬೀಳಲಿದೆ. ಸಮುದ್ರದಲ್ಲಿ 40 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.