ADVERTISEMENT

ಉಡುಪಿ ಪರ್ಯಾಯಕ್ಕೆ ₹10 ಕೋಟಿ ಅನುದಾನ: ಲಕ್ಷ್ಮೀ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 17 ಜನವರಿ 2024, 11:20 IST
Last Updated 17 ಜನವರಿ 2024, 11:20 IST
<div class="paragraphs"><p>ಉಡುಪಿ ಕೃಷ್ಣಮಠ</p><p></p></div>

ಉಡುಪಿ ಕೃಷ್ಣಮಠ

   

ಉಡುಪಿ: ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡುತ್ತಿದ್ದು, ₹10 ಕೋಟಿ ಅನುದಾನ ಬಿಡುಗಡೆ ಮಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ADVERTISEMENT

ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು,  ನಗರೋತ್ಥಾನ ಯೋಜನೆಯಡಿ ಉಡುಪಿ ನಗರದ ಅಭಿವೃದ್ಧಿಗೆ ₹ 30 ಕೋಟಿ ಬಿಡುಗಡೆ ಮಾಡಲಾಗಿದೆ. ಪರ್ಯಾಯ ಮಹೋತ್ಸವಕ್ಕೂ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಕ್ರಮವಹಿಸಲಿದ್ದಾರೆ ಎಂದರು.

ಕಾರಣಾಂತರಗಳಿಂದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿಲ್ಲ. ಗೃಹ ಸಚಿವ ಜಿ.ಪರಮೇಶ್ವರ್ ಪರ್ಯಾಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.