ADVERTISEMENT

ಕೃಷಿ ಕಾಯ್ದೆ: ಕೇಂದ್ರವು ಎರಡು ಹೆಜ್ಜೆ ಮುಂದಿಡಲಿದೆ–ಕಲ್ಲಡ್ಕ ಪ್ರಭಾಕರ ಭಟ್‌

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2021, 12:28 IST
Last Updated 21 ನವೆಂಬರ್ 2021, 12:28 IST
ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್
ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್    

ಉಡುಪಿ: ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಂಡು ಕೇಂದ್ರ ಸರ್ಕಾರ ಒಂದು ಹೆಜ್ಜೆ ಹಿಂದಿಟ್ಟಿರುವುದು ತಪ್ಪಲ್ಲ; ಮುಂದೆ ಎರಡು ಹೆಜ್ಜೆ ಮುಂದಿಡಲಿದೆ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ನಗರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕೃಷಿ ಕಾಯ್ದೆಗಳು ಜನಮಾನಸಕ್ಕೆ ಮುಟ್ಟಬೇಕು ಎಂದು ಒಂದು ವರ್ಷ ಕಾದರೂ ಪ್ರಯೋಜನವಾಗಲಿಲ್ಲ. ಹಾಗಾಗಿ, ಜನಸಾಮಾನ್ಯರಿಗೆ ತೊಂದರೆಯಾಗಬಾರದು ಎಂದು ರೈತರ ಪರವಾಗಿದ್ದ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಪಾಪಸ್ ಪಡೆದಿದೆ. ಸರ್ಕಾರದ ನಿರ್ಧಾರ ಉತ್ತಮವಾಗಿದೆ ಎಂದು ಸಮರ್ಥಿಸಿಕೊಂಡರು.

ವಿಪಕ್ಷಗಳು ವಿರೋಧಿ ಪಕ್ಷಗಳಾಗಿದ್ದು, ಸರ್ಕಾರದ ಎಲ್ಲ ಕಾರ್ಯಗಳನ್ನು ವಿರೋಧಿಸುತ್ತಿವೆ. ಭಿನ್ನ ಅಭಿಪ್ರಾಯಗಳಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆಗಳು ನಡೆಯಬೇಕು. ಆದರೆ, ವಿರೋಧ ಪಕ್ಷಗಳು ಹಾಗೂ ಪ್ರತಿಭಟನಾಕಾರರು ಸರ್ಕಾರದ ಜತೆಗೆ ಚರ್ಚೆಗೆ ಸಿದ್ಧರಿಲ್ಲ. ಮುಂದೆ, ಚರ್ಚೆ, ಮಾತುಕತೆ ಹಾಗೂ ತಿದ್ದುಪಡಿಗಳೊಂದಿಗೆ ಮತ್ತೆ ಕೃಷಿ ಕಾಯ್ದೆಗಳನ್ನು ಅನುಷ್ಠಾನಕ್ಕೆ ತರಲಿದೆ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ADVERTISEMENT

ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿಲ್ಲ. ರಾಷ್ಟ್ರದ ದೃಷ್ಟಿಯಿಂದ ನಿರ್ಧಾರ ತೆಗೆದುಕೊಂಡಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.