ADVERTISEMENT

ಡಾ ಮಹಾಬಲೇಶ್ವರ ರಾವ್‌ಗೆ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಪ್ರದಾನ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 16:11 IST
Last Updated 28 ಸೆಪ್ಟೆಂಬರ್ 2021, 16:11 IST
ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಅವರಿಗೆ ಅವರ ನಿವಾಸದಲ್ಲಿ ಈಚೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಅವರಿಗೆ ಅವರ ನಿವಾಸದಲ್ಲಿ ಈಚೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.   

ಉಡುಪಿ: ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಅವರಿಗೆ ಅವರ ನಿವಾಸದಲ್ಲಿ ಈಚೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಡಾ.ಮಹಾಬಲೇಶ್ವರ ರಾವ್ ಅವರ 'ಶಿಕ್ಷಣದಲ್ಲಿ ಭಾಷೆ ಮತ್ತು ಮಾಧ್ಯಮದ ಸಮಸ್ಯೆಗಳು' ಕೃತಿಗೆ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಸಿಕ್ಕಿತ್ತು. ಕಾರಣಾಂತರಗಳಿಂದ ಅವರು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಬಿ.ವಿ.ವಸಂತ ಕುಮಾರ್, ಸದಸ್ಯರಾದ ಡಾ. ಶರಭೇಂದ್ರ ಸ್ವಾಮಿ, ರಿಜಿಸ್ಟ್ರಾರ್ ಎನ್.ಕರಿಯಪ್ಪ ಅವರ ತಂಡ ಡಾ.ಮಹಾಬಲೇಶ್ವರ ರಾವ್ ಅವರ ಮನೆಗೆ ಭೇಟಿನೀಡಿ ಬಹುಮಾನ ವಿತರಿಸಿದರು.

ರಾಮಾಂಜಿ, ನರಸಿಂಹ ಮೂರ್ತಿ, ಹರೀಶ್ ಕುಮಾರ್, ಸುಕನ್ಯಾ ಕಳಸ ಕಾರ್ಯಕ್ರಮದಲ್ಲಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.