ADVERTISEMENT

ಸರಳ, ಸಜ್ಜನಿಕೆಯ ಧೀಮಂತ ನಾಯಕಿ

ಸುಷ್ಮಾ ಸ್ವರಾಜ್ ನಿಧನಕ್ಕೆ ಮಠಾಧೀಶರ, ರಾಜಕೀಯ ನಾಯಕರ ಸಂತಾಪ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 14:56 IST
Last Updated 7 ಆಗಸ್ಟ್ 2019, 14:56 IST
ಪುತ್ತಿಗೆ ಮಠದ 3ನೇ ಪರ್ಯಾಯದ ಅವಧಿಯಲ್ಲಿ ಶ್ರೀಕೃಷ್ಣಮಠಕ್ಕೆ ಸುಷ್ಮಾ ಸ್ವರಾಜ್‌ ಅವರು ಭೇಟಿನೀಡಿದ್ದ ದೃಶ್ಯ
ಪುತ್ತಿಗೆ ಮಠದ 3ನೇ ಪರ್ಯಾಯದ ಅವಧಿಯಲ್ಲಿ ಶ್ರೀಕೃಷ್ಣಮಠಕ್ಕೆ ಸುಷ್ಮಾ ಸ್ವರಾಜ್‌ ಅವರು ಭೇಟಿನೀಡಿದ್ದ ದೃಶ್ಯ   

ಉಡುಪಿ: ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಅವರೊಂದಿಗಿನ ನೆನಪುಗಳನ್ನು ಸ್ಮರಿಸಿದ್ದಾರೆ.

ಪಲಿಮಾರು ಶ್ರೀಗಳ ಸಂತಾಪ:ಚಿಕ್ಕ ವಯಸ್ಸಿನಿಂದಲೇ ದೇಶ ಭಕ್ತಿಯನ್ನು ಮೈಗೂಡಿಸಿಕೊಂಡಿದ್ದ ದೇಶ ಸೇವೆಗೆ ಜೀವನವನ್ನೇ ಮುಡಿಪಿಟ್ಟಿದ್ದ ಸುಷ್ಮಾ ಸ್ವರಾಜ್, ವಿವಿಧ ಜವಾಬ್ದಾರಿಯುತ ಹುದ್ದೆಗಳನ್ನು ಅಲಂಕರಿಸಿ ಯಶಸ್ವಿಯಾಗಿ ನಿಭಾಯಿಸಿದ್ದರು. ಸರಳ ಸಜ್ಜನಿಕೆಯ ಧೀಮಂತ ನಾಯಕಿಯ ನಿಧನ ದುಃಖ ತಂದಿದೆ. ಮೃತರ ಕುಟುಂಬ ವರ್ಗಕ್ಕೆ ದುಃಖ ಸಹಿಸುವ ಶಕ್ತಿ ಸಿಗಲಿ, ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪರ್ಯಾಯ ಪಲಿಮಾರು ಶ್ರೀಗಳು ತಿಳಿಸಿದ್ದಾರೆ.

ಪುತ್ತಿಗೆ ಶ್ರೀಗಳ ಸಂತಾಪ:ಸೆಪ್ಟೆಂಬರ್ 11, 2009ರಂದು ಪುತ್ತಿಗೆ ಮಠದ 3ನೇ ಪರ್ಯಾಯದ ಅವಧಿಯಲ್ಲಿಶ್ರೀಕೃಷ್ಣ ಜಯಂತಿಯ ಮಾಸೋತ್ಸವವನ್ನು ಸುಷ್ಮಾ ಸ್ವರಾಜ್‌ ಉದ್ಘಾಟಿಸಿದ್ದರು. ಅವರಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಅವರ ಸಾವು ತೀವ್ರ ದುಃಖ ತಂದಿದೆ ಎಂದು ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

ADVERTISEMENT

ದೇಶದ ಹೆಮ್ಮೆಯ ಮಗಳಾಗಿದ್ದ ಸುಷ್ಮಾ ಸ್ವರಾಜ್ ಭಾರತಾಂಬೆಯ ಮಡಿಲು ಸೇರಿದ್ದಾರೆ. 1999ರಲ್ಲಿ ಬ್ರಹ್ಮಾವರದಿಂದ ಸ್ಪರ್ಧಿಸಿದ್ದಾಗ ಸುಷ್ಮಾ ಸ್ವರಾಜ್ ಪ್ರಚಾರ ಮಾಡಲು ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದರು. ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ನನ್ನ ಹಾಗೂ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಪರವಾಗಿ ಪ್ರಚಾರ ಮಾಡಿದ್ದರು.

ಭಾರತೀಯ ಸಂಸ್ಕೃತಿಯ ಪ್ರತಿಬಿಂಬವಾಗಿ ಹಣೆಯಲ್ಲಿ ಕಾಸಗಲ ತಿಲಕವನ್ನಿಟ್ಟುಕೊಂಡು ಕನ್ನಡದಲ್ಲಿ ಮಾತನಾಡಿದ್ದರು. ಇಷ್ಟು ಬೇಗ ಸುಷ್ಮಾ ಸ್ವರಾಜ್ ಎಲ್ಲರನ್ನೂ ಅಗಲಿರುವುದು ನೋವು ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನುಡಿನಮನ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.