ADVERTISEMENT

ಉಡುಪಿ: ಲಾಕ್‌ಡೌನ್‌ ಬದಲು ಜಿಲ್ಲೆಯ ಗಡಿಗಳ ಸೀಲ್‌ಡೌನ್; ಜಿಲ್ಲಾಧಿಕಾರಿ ಜಿ.ಜಗದೀಶ್

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 12:23 IST
Last Updated 14 ಜುಲೈ 2020, 12:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ಜುಲೈ 15ರಂದು ರಾತ್ರಿ 8ರಿಂದ 29ರವರೆಗೆ ಜಿಲ್ಲಾ ಗಡಿಗಳನ್ನು ಸೀಲ್‌ಡೌನ್‌ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಮಂಗಳವಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘ತಜ್ಞ ವೈದ್ಯರ ಸಲಹೆಯಂತೆ ಜಿಲ್ಲೆಯಲ್ಲಿ ಲಾಕ್‌ಡೌನ್ ಬದಲು ಸೀಲ್‌ಡೌನ್‌ ಮಾಡಲು ನಿರ್ಧರಿಸಲಾಗಿದೆ. ಈ ಅವಧಿಯಲ್ಲಿ ಹೊರ ಜಿಲ್ಲೆಗಳಿಂದ ಯಾರೂ ಬರುವಂತಿಲ್ಲ, ಜಿಲ್ಲೆಯವರು ಹೊರಗೆ ಹೋಗುವಂತಿಲ್ಲ. ತುರ್ತು ವೈದ್ಯಕೀಯ ಅಗತ್ಯತೆಗಳಿಗೆ ಮಾತ್ರ ಜಿಲ್ಲೆಯನ್ನು ಪ್ರವೇಶಿಸಬಹುದು’ ಎಂದರು.

ಜಿಲ್ಲೆಯಿಂದ ಹೊರ ಹೋಗುವವರಿಗೆ ಹಾಗೂ ಬರುವವರಿಗೆ ಬುಧವಾರ ರಾತ್ರಿ 8ರವರೆಗೆ ಕಾಲಾವಕಾಶ ಇದೆ. ನಂತರ ಜಿಲ್ಲೆಯ ಎಲ್ಲ ಗಡಿಗಳು ಬಂದ್ ಆಗಲಿವೆ. ಸಾರ್ವಜನಿಕರ ಸಾರಿಗೆ ಸಹ ಇರುವುದಿಲ್ಲ. ಉಳಿದಂತೆ ಇತರೆ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.