ADVERTISEMENT

ಶಿರಿಯಾರ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

​ಪ್ರಜಾವಾಣಿ ವಾರ್ತೆ
Published 11 ಮೇ 2025, 13:48 IST
Last Updated 11 ಮೇ 2025, 13:48 IST
ಶಿರಿಯಾರ ಗ್ರಾ.ಪಂ. ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು
ಶಿರಿಯಾರ ಗ್ರಾ.ಪಂ. ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು   

ಬ್ರಹ್ಮಾವರ: ಶಿರಿಯಾರ ಗ್ರಾಮ ಪಂಚಾಯಿತಿ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ, ಓಂ ಶಕ್ತಿ ಸಂಜೀವಿನಿ ಒಕ್ಕೂಟದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಪಂಚಾಯಿತಿ ಅಧ್ಯಕ್ಷ ಸುಧೀಂದ್ರ ಶೆಟ್ಟಿ ಮಾತನಾಡಿ, ಬೇಸಿಗೆ ಶಿಬಿರವು ಮಕ್ಕಳ ಸೃಜನಶೀಲ ವ್ಯಕ್ತಿತ್ವವನ್ನು ವೃದ್ಧಿಸುತ್ತದೆ. ಈ ಯೋಜನೆ ಸರ್ಕಾರದ ಉತ್ತಮ ಯೋಜನೆಗಳಲ್ಲಿ ಒಂದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿನೇಶ ಶೆಟ್ಟಿ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಬಿರದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಕಲಾ, ನವ್ಯಾ, ಗ್ರಾ.ಪಂ. ಉಪಾಧ್ಯಕ್ಷರು, ಸದಸ್ಯರು, ಅರಿವು ಕೇಂದ್ರದ ಮೇಲ್ವಿಚಾರಕರು, ಸಂಜೀವಿನಿ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು, ಪದಾಧಿಕಾರಿಗಳು, ಎಲ್‌ಸಿಆರ್‌ಪಿ, ಪಶು ಸಖಿ, ಸಿಬ್ಬಂದಿ ಭಾಗವಹಿಸಿದ್ದರು.

ADVERTISEMENT

ಶಿಬಿರಾರ್ಥಿಗಳಾದ ಹರ್ಷಾಲಿ ಸ್ವಾಗತಿಸಿದರು. ತನಿಷಾ ವಂದಿಸಿದರು. ಮನ್ವಿಶ್, ಸಮೀಕ್ಷಾ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.