ADVERTISEMENT

ಡಿಕೆಶಿಗೆ ಕಡ್ಸಲೆ ಉಡುಗೊರೆ: ಜಾಲತಾಣದಲ್ಲಿ ಟೀಕೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2021, 13:15 IST
Last Updated 7 ಜುಲೈ 2021, 13:15 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸ್ಥಳೀಯ ಕಾಂಗ್ರೆಸ್‌ ಮುಖಂಡರೊಬ್ಬರು ದೈವಾರಾಧನೆಗೆ ಬಳಸುವ ಕಡ್ಸಲೆಯನ್ನು ಉಡುಗೊರೆ ನೀಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸ್ಥಳೀಯ ಕಾಂಗ್ರೆಸ್‌ ಮುಖಂಡರೊಬ್ಬರು ದೈವಾರಾಧನೆಗೆ ಬಳಸುವ ಕಡ್ಸಲೆಯನ್ನು ಉಡುಗೊರೆ ನೀಡಿದರು.   

ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸ್ಥಳೀಯ ಕಾಂಗ್ರೆಸ್‌ ಮುಖಂಡರೊಬ್ಬರು ದೈವಾರಾಧನೆಗೆ ಬಳಸುವ ಕಡ್ಸಲೆಯನ್ನು ಉಡುಗೊರೆ ನೀಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿವೆ.

ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ‘ತುಳುನಾಡಿನ ದೈವಾರಾಧನೆ ಪದ್ಧತಿಗೆ ಕಾಂಗ್ರೆಸ್‌ನಿಂದ ಅವಮಾನವಾಗಿದೆ. ದೈವದ ಕಡ್ಸಲೆಗೆ ತನ್ನದೇ ಶಕ್ತಿ ಹಾಗೂ ನಂಬಿಕೆ ಇದೆ. ಇದನ್ನು ರಾಜಕೀಯಕ್ಕೆ ಬಳಸಿರುವುದು ಅಕ್ಷಮ್ಯ ಅಪರಾಧ. ತುಳುನಾಡಿ ಸಮಸ್ತರಲ್ಲಿ ಕಾಂಗ್ರೆಸ್‌ ಕ್ಷಮೆಯಾಚಿಸಬೇಕು’ ಎಂದು ಟ್ವಿಟ್ಟರ್‌ನಲ್ಲಿ ಆಗ್ರಹಿಸಿದ್ದಾರೆ.

ಸುನೀಲ್ ಕುಮಾರ್ ಅವರ ಟ್ವೀಟ್‌ಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.