ADVERTISEMENT

ಕೃಷ್ಣೆಗೌಡರಿಗೆ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2024, 14:21 IST
Last Updated 12 ಸೆಪ್ಟೆಂಬರ್ 2024, 14:21 IST
ಪ್ರೊ.ಕೃಷ್ಣೆಗೌಡ
ಪ್ರೊ.ಕೃಷ್ಣೆಗೌಡ   

ಬ್ರಹ್ಮಾವರ (ಉಡುಪಿ): ಕೋಟತಟ್ಟು ಗ್ರಾಮ ಪಂಚಾಯಿತಿ, ಕೋಟ ಡಾ.ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ನೀಡುವ ‌‘ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ’ಗೆ ವಾಗ್ಮಿ, ಸಾಹಿತಿ ಪ್ರೊ.ಕೃಷ್ಣೆಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ₹ 75 ಸಾವಿರ ನಗದು ಒಳಗೊಂಡಿದೆ.

ಅ.10ರಂದು ಕೋಟ ಶಿವರಾಮ ಕಾರಂತರ ಜನ್ಮದಿನದಂದು ಕಾರಂತರ ಬೆಳ್ಳಿ ಮೂರ್ತಿಯೊಂದಿಗೆ ಪ್ರಶಸ್ತಿ ಪ್ರದಾನ ಆಗಲಿದೆ ಎಂದು ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ ಕುಂದರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT