ಶಿರ್ವ: ಕಟಪಾಡಿಯಲ್ಲಿ ನಡೆದ ಕಾಪು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿನ ಕೃತಜ್ಞತಾರ್ಪಣೆ ಸಮಾರಂಭ ಈಚೆಗೆ ನಡೆಯಿತು. ಸಮ್ಮೇಳನದ ಅಧ್ಯಕ್ಷ ಕೆ.ಸತ್ಯೇಂದ್ರ ಪೈ ಮಾತನಾಡಿದರು.
ಕಸಾಪ ಕಾಪು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಾಂಶುಪಾಲ ದಯಾನಂದ ಪೈ ಅಧ್ಯಕ್ಷತೆಯಲ್ಲಿ ನಡೆದ ಸ್ವಾಗತ ಸಮಿತಿಯ ಕಾರ್ಯ ಅನುಕರಣೀಯ ಎಂದರು.
ದಯಾನಂದ ಪೈ, ಕಾರ್ಯದರ್ಶಿ ಭಾಸ್ಕರ ಕಾಮತ್, ಫ್ರೌಢ ಶಾಲಾ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ತಂತ್ರಿ, ಆಡಳಿತ ಮಂಡಳಿ ಸದಸ್ಯ ಗಣೇಶ್ ಕಿಣಿ, ಕಸಾಪ ತಾಲ್ಲೂಕು ಘಟಕದ ಕೋಶಾಧ್ಯಕ್ಷ ವಿದ್ಯಾಧರ್ ಪುರಾಣಿಕ, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಕೃಷ್ಣಕುಮಾರ್ ರಾವ್ ಮಟ್ಟು, ಸಂಘಟನಾ ಕಾರ್ಯದರ್ಶಿ ದೀಪಕ್ ಬೀರ, ಕಸಾಪ ಸಮಿತಿ ಸದಸ್ಯೆ ಗ್ರೆಟ್ಟಾ ಮೊರಾಸ್ ಪಲಿಮಾರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿ ಪ್ರಭಾ ಬಿ.ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಕಿರಣ್ಕುಮಾರ್ ಶೆಟ್ಟಿ, ದಿಲೀಪ್ ಕುಮಾರ್ ಬನ್ಸೋಡೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.