ADVERTISEMENT

ಉಡುಪಿ: ತಂದೆ ಕೊಲೆ- ಮಗನಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2023, 16:19 IST
Last Updated 22 ಫೆಬ್ರುವರಿ 2023, 16:19 IST
   

ಉಡುಪಿ: ತಂದೆಯನ್ನು ಕೊಲೆ ಮಾಡಿದ ಮಗನಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ನೀಡಿದೆ.

ಪೆರಂಪಳ್ಳಿಯ ಪ್ರಜೋತ್ ಶೆಟ್ಟಿ ಶಿಕ್ಷೆಗೆ ಗುರಿಯಾದ ಆರೋಪಿ. 2020ರ ಜ.13ರಂದು ಮದ್ಯಪಾನ ಮಾಡಲು ಹಣ ನೀಡಲಿಲ್ಲ ಎಂದು ಹಾಗೂ ಆಸ್ತಿಯಲ್ಲಿ ಪಾಲು ಕೊಡದ ಕಾರಣಕ್ಕೆ ತಂದೆ ಮಹಾಬಲ ಶೆಟ್ಟಿ ಅವರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡು ಮಹಾಬಲ ಶೆಟ್ಟಿ ಮೃತಪಟ್ಟಿದ್ದರು.

ಅಂದಿನ ಮಣಿಪಾಲ ಇನ್‌ಸ್ಪೆಕ್ಟರ್ ಮಂಜುನಾಥ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 25 ಸಾಕ್ಷಿಗಳ ವಿಚಾರಣೆ ನಡೆದಿತ್ತು. ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ದಿನೇಶ್ ಹೆಗಡೆ ಆರೋಪಿಗೆ ಜೀವಾವಧಿ ಶಿಕ್ಷೆ ₹ 10,000 ದಂಡ ವಿಧಿಸಿದ್ದಾರೆ.

ADVERTISEMENT

ಪ್ರಾಸಿಕ್ಯೂಷನ್ ಪರವಾಗಿ ಸರ್ಕಾರಿ ಅಭಿಯೋಜಕ ಜಯರಾಮ ಶೆಟ್ಟಿ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.