ಕಾಪು (ಪಡುಬಿದ್ರಿ): ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವೃದ್ಧಿ ಹಾಗೂ ಉತ್ತಮ ಆಯುಷ್ಯಕ್ಕಾಗಿ ಜಿಲ್ಲಾ ಜೆಡಿಎಸ್ ವತಿಯಿಂದ ಶನಿವಾರ ಮಹತೋಭಾರ ಲಕ್ಷ್ಮಿ ಜನಾರ್ದನ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ನೇತೃತ್ವ ವಹಿಸಿದ್ದರು. ಪೂಜೆಯ ನಂತರ ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ಜರಗಿತು.
ಜೆಡಿಎಸ್ ರಾಜ್ಯ ನಾಯಕರುಗಳಾದ ಸುಧಾಕರ್ ಶೆಟ್ಟಿ, ಗಂಗಾಧರ ಬಿರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಕಾರ್ಕಳ ಬ್ಲಾಕ್ ಅಧ್ಯಕ್ಷ ಶ್ರೀಕಾಂತ ಹೆಬ್ರಿ, ಕಾಪು ಬ್ಲಾಕ್ ಅಧ್ಯಕ್ಷ ಭರತ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಕುಂದಾಪುರ, ಜಿಲ್ಲಾ ನಾಯಕರುಗಳಾದ ಉದಯ ಆರ್. ಶೆಟ್ಟಿ, ರಜಾಕ್ ಉಚ್ಚಿಲ, ದೇವರಾಜ್ ಕಾಪು, ರಾಮರಾವ್, ವಿಶಾಲಾಕ್ಷಿ, ವಿಮಲಾ ಮಜೂರು, ಹರೀಶ್ ಹೆಗಡೆ, ಪ್ರಶಾಂತ್ ಕಾಪು, ಪ್ರಭಾಕರ್ ಶೆಟ್ಟಿ, ರವಿಚಂದ್ರ, ಅಶ್ರಫ್ ಪಡುಬಿದ್ರಿ ಪ್ರಶಾಂತ್ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಕಾರ್ಯಕರ್ತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.