ADVERTISEMENT

ಕಾರ್ಕಳ: 4 ಶಾಲೆಗಳಿಗೆ ‘ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 14:02 IST
Last Updated 3 ಆಗಸ್ಟ್ 2024, 14:02 IST
ಕಾರ್ಕಳ ತಾಲ್ಲೂಕಿನ ನಲ್ಲೂರು ಹಿರಿಯ ಪ್ರಾಥಮಿಕ ಶಾಲೆಗೆ ‘ರಾಜ್ಯಮಟ್ಟದ ಹಸಿರು ನೈರ್ಮಲ್ಯ ಹಾಗೂ ಅಭ್ಯುದಯ ಪ್ರಶಸ್ತಿ’ಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ ನೀಡಲಾಯಿತು.
ಕಾರ್ಕಳ ತಾಲ್ಲೂಕಿನ ನಲ್ಲೂರು ಹಿರಿಯ ಪ್ರಾಥಮಿಕ ಶಾಲೆಗೆ ‘ರಾಜ್ಯಮಟ್ಟದ ಹಸಿರು ನೈರ್ಮಲ್ಯ ಹಾಗೂ ಅಭ್ಯುದಯ ಪ್ರಶಸ್ತಿ’ಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ ನೀಡಲಾಯಿತು.   

ಕಾರ್ಕಳ: ಶ್ರೀಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್‌ ವತಿಯಿಂದ ನೀಡಲಾಗುವ ‘ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ’ ತಾಲ್ಲೂಕಿನ ನಾಲ್ಕು ಶಾಲೆಗಳಿಗೆ ಲಭಿಸಿದೆ.

ಪ್ರಶಸ್ತಿ ಪಡೆದ ಸಂಸ್ಥೆಗಳು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಲ್ಲೂರು, ಸರ್ಕಾರಿ ಪದವಿ ಪೂರ್ವ ಕಾಲೇಜು ಬೈಲೂರು, ಸರ್ಕಾರಿ ಪ್ರೌಢಶಾಲೆ ಪೆವಾಜೆ ಹಾಗೂ ಸರ್ಕಾರಿ ಪ್ರೌಢಶಾಲೆ ನಲ್ಲೂರು.

ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸಂಸ್ಥಾಪಕ ಮಧುಸೂದನ ಸಾಯಿ ಪ್ರಶಸ್ತಿ ಪ್ರದಾನ ಮಾಡಿದರು.

ADVERTISEMENT

ನಲ್ಲೂರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ನಾಗೇಶ್ ಪ್ರಶಸ್ತಿ ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.