ADVERTISEMENT

ಭೂತ ಕೋಲ ಹಿಂದೂ ಧರ್ಮದ ಸಂಸ್ಕೃತಿಯಲ್ಲ ಎಂದಿದ್ದ ನಟ ಚೇತನ್ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2022, 13:35 IST
Last Updated 20 ಅಕ್ಟೋಬರ್ 2022, 13:35 IST
ನಟ ಚೇತನ್
ನಟ ಚೇತನ್   

ಉಡುಪಿ: ‘ಭೂತ ಕೋಲ ಹಿಂದೂ ಧರ್ಮದ ಸಂಸ್ಕೃತಿಯಲ್ಲ’ ಎಂಬ ಹೇಳಿಕೆ ನೀಡಿರುವ ನಟ ಚೇತನ್ ವಿರುದ್ಧ ಹಿಂದೂ ಜಾಗರಣಾ ವೇದಿಕೆ ಕಾರ್ಕಳ ನಗರ ಠಾಣೆಗೆ ದೂರು ನೀಡಿದೆ.

ನಟ ಚೇತನ್‌ ಸಾಮಾಜಿಕ ಜಾಲತಾಣ ಹಾಗೂ ಟಿವಿ ಮಾಧ್ಯಮದಲ್ಲಿ ಹಿಂದೂ ಧರ್ಮಕ್ಕೆ, ದೈವ ದೇವರ ಆಚಾರ ವಿಚಾರಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಕರಾವಳಿಯಲ್ಲಿ ಪುರಾತನ ಕಾಲದಿಂದಲೂ ಶ್ರದ್ಧೆ ಭಕ್ತಿಯಿಂದ ಹಿಂದೂಗಳು ದೈವ, ದೇವರು ಹಾಗೂ ಭೂತ ಕೋಲ ಆರಾಧಿಸಿಕೊಂಡು ಬರಲಾಗುತ್ತಿದೆ.

ನಟ ಚೇತನ್‌ ಹಿಂದೂ ಧರ್ಮದ ಆಚಾರ, ವಿಚಾರ, ನಂಬಿಕೆಗಳಿಗೆ ಧಕ್ಕೆಯಾಗುವಂತೆ ಮಾತನಾಡಿದ್ದು ಖಂಡನೀಯವಾಗಿದ್ದು ಕಾನೂನು ಕ್ರಮ ಜರುಗಿಸಬೇಕು. ಇಂತಹ ಹೇಳಿಕೆಗಳನ್ನು ನೀಡದಂತೆ ನಿರ್ಬಂಧ ವಿಧಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ADVERTISEMENT

ದೂರಿನ ಕುರಿತು ಪ್ರತಿಕ್ರಿಯೆ ನೀಡಿರುವ ಕಾರ್ಕಳ ನಗರ ಠಾಣೆ ಪಿಎಸ್‌ಐ ನಟ ಚೇತನ್‌ ವಿರುದ್ಧ ಕಾನೂನು ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆಯಿಂದ ದೂರು ಸಲ್ಲಿಕೆಯಾಗಿದ್ದು ಪರಿಶೀಲಿಸಲಾಗತ್ತಿದೆ. ಇದುವರೆಗೂ ಚೇತನ್ ವಿರುದ್ಧ ಪ್ರಕರಣ ದಾಖಲಾಗಿಲ್ಲ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.