ADVERTISEMENT

ಪಿಯು ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗುವ ಭಯ; ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2022, 3:07 IST
Last Updated 2 ಜುಲೈ 2022, 3:07 IST
   

ಸಿದ್ದಾಪುರ: ಪಿಯು ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಂಕರನಾರಾಯಣ ಗ್ರಾಮದ ಒಡ್ಡನಬೇರು ಬಾಬಣ್ಣ ಕುಲಾಲರ ಪುತ್ರಿ ಮಾನಸ(17) ಮೃತಳು.

ಈಕೆ ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದು ಏಪ್ರಿಲ್ ತಿಂಗಳ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಳು. ನಂತರ ಜೂನ್ ತಿಂಗಳ ಸಪ್ಲಿಮೆಂಟರಿ ಪರೀಕ್ಷೆ ಕಟ್ಟಿದ್ದು, ತಾನು ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಬಹುದು ಎಂದು ಹೆದರಿ ಮನೆಯ ಎದುರಿನ ಕೊಟ್ಟಿಗೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT