ADVERTISEMENT

ಕುಂದಾಪುರ | ನಾಡ ಐಟಿಐ ಸಂಸ್ಥೆಯಲ್ಲಿ ಘಟಿಕೋತ್ಸವ

ಭವಿಷ್ಯ ರೂಪಿಸುವ ತಾಂತ್ರಿಕ ಶಿಕ್ಷಣದ ಅವಶ್ಯಕತೆ ಇದೆ: ಫ್ರಾನ್ಸಿಸ್ ಕರ್ನೆಲಿಯೊ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 6:56 IST
Last Updated 10 ಅಕ್ಟೋಬರ್ 2025, 6:56 IST
ಕುಂದಾಪುರ ಸಮೀಪದ ನಾಡದ ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜ ಐಟಿಐ ಸಂಸ್ಥೆಯಲ್ಲಿ ಘಟಿಕೋತ್ಸವ ಸಮಾರಂಭ ನಡೆಯಿತು
ಕುಂದಾಪುರ ಸಮೀಪದ ನಾಡದ ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜ ಐಟಿಐ ಸಂಸ್ಥೆಯಲ್ಲಿ ಘಟಿಕೋತ್ಸವ ಸಮಾರಂಭ ನಡೆಯಿತು   

ಕುಂದಾಪುರ: ‘ಆಧುನಿಕ ಜಗತ್ತಿನಲ್ಲಿ ಭವಿಷ್ಯವನ್ನು ಕಟ್ಟಿಕೊಳ್ಳುವ, ವೃತ್ತಿಪರತೆ ಹೊಂದಲು ತಾಂತ್ರಿಕ ಶಿಕ್ಷಣದ ಆಯ್ಕೆ ಒಳ್ಳೆಯ ಮಾರ್ಗ’ ಎಂದು ಪಡುಕೋಣೆ ಇಗರ್ಜಿಯ ಧರ್ಮಗುರು ಫ್ರಾನ್ಸಿಸ್ ಕರ್ನೆಲಿಯೊ ಅಭಿಪ್ರಾಯಪಟ್ಟರು.

ನಾಡದ ಫಾ.ರೋಬರ್ಟ್ ಜ್ಹಡ್ ಎಂ ಡಿಸೋಜ ಐಟಿಐ ಸಂಸ್ಥೆಯಲ್ಲಿ ನಡೆದ ಘಟಿಕೋತ್ಸವ ಸಮಾರಂಭ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.

ಸರ್ಕಾರಿ, ಖಾಸಗಿ ಹಾಗೂ ಸ್ವಉದ್ಯೋಗಕ್ಕೆ ಅತ್ಯಂತ ಉಪಯುಕ್ತವಾಗಿರುವ ಐಟಿಐ ಶಿಕ್ಷಣ ಸಂಸ್ಥೆಗಳು ಬಡವರ ಎಂಜಿನಿಯರಿಂಗ್ ಕಾಲೇಜುಗಳಿದ್ದಂತೆ. ಕೇವಲ 1-2 ವರ್ಷಗಳ ಒಳಗೆ ಕಡಿಮೆ ವೆಚ್ಚದಲ್ಲಿ ವೃತ್ತಿಯ ನೈಪುಣ್ಯ ಹೇಳಿಕೊಡುವ ಈ ಶಿಕ್ಷಣ ಪದ್ಧತಿಯಲ್ಲಿ ತರಬೇತಿ ಪಡೆದುಕೊಂಡ ವಿದ್ಯಾರ್ಥಿಗಳು ಕೆಲಸವಿಲ್ಲ ಎಂದು ಮನೆಯಲ್ಲಿ ಕುಳಿತಿರುವ ಉದಾಹರಣೆಗಳು ಅತ್ಯಂತ ವಿರಳ ಎಂದರು.

ADVERTISEMENT

ಪ್ರಾಕ್ತನ ವಿದ್ಯಾರ್ಥಿ, ಕುಂದಾಪುರದ ಕೆಪಿಟಿಸಿಎಲ್ ಸಹಾಯಕ ಎಂಜಿನಿಯರ್ ಗಣೇಶ್ ದೇವಾಡಿಗ ಮಾತನಾಡಿ, ‘ಐಟಿಐ ಶಿಕ್ಷಣ ಪಡೆದುಕೊಂಡಿರುವವರಿಗೆ ದೇಶ ಹಾಗೂ ವಿದೇಶದಲ್ಲಿ ವಿಪುಲ ಅವಕಾಶಗಳಿದ್ದು, ಉತ್ತಮ ವೇತನ ಮತ್ತು ಸೌಲಭ್ಯ ದೊರಕುತ್ತಿದೆ’ ಎಂದರು.

ಆಡಳಿತ ಮಂಡಳಿ ಕಾರ್ಯದರ್ಶಿ ನವೀನ್ ಲೋಬೊ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ಸ್ಥಾಪನೆಗೊಂಡಿರುವ ಈ ಸಂಸ್ಥೆಯಿಂದ ಶಿಕ್ಷಣ ಪಡೆದುಕೊಂಡ ಸಾವಿರಾರು ವಿದ್ಯಾರ್ಥಿಗಳು ದೇಶ-ವಿದೇಶದಲ್ಲಿ ಉತ್ತಮ ಜೀವನವನ್ನು ಕಟ್ಟಿಕೊಂಡಿದ್ದಾರೆ. ಸಂಸ್ಥೆಯ ಯಶಸ್ಸಿನ ಹಿಂದೆ ದಿ.ಆಲ್ಫೋನ್ಸ್ ಲೋಬೊ ಸೇರಿದಂತೆ ಹಲವು ಮಂದಿಯ ಶ್ರಮವಿದೆ’ ಎಂದರು.

ಆಡಳಿತ ಮಂಡಳಿ ಅಧ್ಯಕ್ಷ ಕಿರಣ್ ಮೆಲ್ವಿನ್ ಲೋಬೊ ಅಧ್ಯಕ್ಷತೆ ವಹಿಸಿದ್ದರು‌. ಸಂಸ್ಥೆಯ ಪ್ರಾಂಶುಪಾಲ ಮನೋಹರ್ ಆರ್. ಕಾಮತ್, ಪ್ಲೇಸ್ಮೆಂಟ್ ಅಧಿಕಾರಿ ರಾಜೇಶ್ ಕೆ.ಸಿ ಇದ್ದರು.

ವಿದ್ಯಾರ್ಥಿ ಅರ್ಜುನ್ ಶೆಟ್ಟಿ ಅನಿಸಿಕೆ ಹಂಚಿಕೊಂಡರು. ವಿನಾಯಕ ಕಾಮತ್ ನಾಯ್ಕನ್‌ಕಟ್ಟೆ ಪ್ರಾರ್ಥಿಸಿದರು. ಕಿರಿಯ ತರಬೇತಿ ಅಧಿಕಾರಿಗಳಾದ ರಾಘವೇಂದ್ರ ಆಚಾರ್ ಸ್ವಾಗತಿಸಿದರು. ಡೆಬ್ರಿಯಲ್ ಪೆಟ್ರೆಸಿಯಾ ಡಿಸೋಜ ಪಟ್ಟಿ ಓದಿದರು. ದಿನೇಶ್ ಕೆ. ಬೈಂದೂರು ವಂದಿಸಿದರು. ಕಿಶೋರ್ ಪೂಜಾರಿ ಸಸಿಹಿತ್ಲು ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.