ADVERTISEMENT

ಹಿಂದುತ್ವವಾದಿ ಕಾಂಗ್ರೆಸ್‌ ಸೇರುವುದಿಲ್ಲ: ಸುಕುಮಾರ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 19 ಜನವರಿ 2019, 14:19 IST
Last Updated 19 ಜನವರಿ 2019, 14:19 IST
ಸುಕುಮಾರ ಶೆಟ್ಟಿ, ಶಾಸಕ
ಸುಕುಮಾರ ಶೆಟ್ಟಿ, ಶಾಸಕ   

ಉಡುಪಿ: ನಾನು ಹಿಂದುತ್ವವಾದಿ, ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ ಎಂದು ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಸ್ಪಷ್ಟಪಡಿಸಿದರು.

ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ಸೇರುತ್ತೇನೆ ಎಂಬ ಅನವಶ್ಯಕ ಸುದ್ದಿಗಳನ್ನು ಮಾಧ್ಯಮಗಳಲ್ಲಿ ತೋರಿಸಿ ಜನರ ಮನಸ್ಸಿನಲ್ಲಿ ಗೊಂದಲ ಸೃಷ್ಟಿಸಬೇಡಿ. ಯಡಿಯೂರಪ್ಪ ಮುಖ್ಯಮಂತ್ರಿ ಆಗಲೇಬೇಕು ಎಂಬುದು ನನ್ನ ಆಶಯ. ಅದರಂತೆ ತಿಂಗಳೊಳಗೆ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ತಿಳಿಸಿದರು.

ರಾಷ್ಟ್ರೀಯ ಅಧಿವೇಶನ ಮುಗಿಸಿ ನೇರವಾಗಿ ಹರಿದ್ವಾರಕ್ಕೆ ತೆರಳಿ ಗಂಗಾಸ್ನಾನ ಮಾಡಿದ್ದೇನೆ. ಹಿಂದುತ್ವದ ಪ್ರತಿಪಾದಕ ಕಾಂಗ್ರೆಸ್‌ ಸೇರಲು ಸಾದ್ಯವೇ ಎಂದು ಪ್ರಶ್ನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.