ADVERTISEMENT

ಸೂರ್ಯನ ಬೆಳಕು ಆರೋಗ್ಯಕ್ಕೆ ಪೂರಕ

ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ವಿಶ್ವಪ್ರಿಯ ಸ್ವಾಮೀಜಿ ಸಲಹೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2018, 15:52 IST
Last Updated 6 ಡಿಸೆಂಬರ್ 2018, 15:52 IST
ವಾರ್ಷಿಕ ಕ್ರೀಡಾಕೂಟಕ್ಕೆ ಪೂರ್ಣ ಪ್ರಜ್ಞ ಶಿಕ್ಷಣ ಸಂಸ್ಥೆಯ ನಿರ್ದೇಶಕ ವಿಶ್ವಪ್ರಿಯ ಸ್ವಾಮೀಜಿ ಚಾಲನೆ ನೀಡಿದರು.
ವಾರ್ಷಿಕ ಕ್ರೀಡಾಕೂಟಕ್ಕೆ ಪೂರ್ಣ ಪ್ರಜ್ಞ ಶಿಕ್ಷಣ ಸಂಸ್ಥೆಯ ನಿರ್ದೇಶಕ ವಿಶ್ವಪ್ರಿಯ ಸ್ವಾಮೀಜಿ ಚಾಲನೆ ನೀಡಿದರು.   

ಉಡುಪಿ: ಬೆಳೆಯುವ ಮಕ್ಕಳು ನಿಯಮಿತವಾಗಿ ಸೂರ್ಯನ ಬೆಳಕಿಗೆ ಮೈಯೊಡ್ಡಿದಾಗ ಮಾತ್ರ ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯಪೂರ್ಣರಾಗಿ ಬೆಳೆಯಲು ಸಾಧ್ಯ. ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ನಿರ್ದೇಶಕ ವಿಶ್ವಪ್ರಿಯ ಸ್ವಾಮೀಜಿ ವಿಶ್ವಪ್ರಿಯ ಸ್ವಾಮೀಜಿ ತಿಳಿಸಿದರು.

ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಈಚೆಗೆ ಏರ್ಪಡಿಸಿದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು,ಒತ್ತಡದ ಬದುಕಿನಲ್ಲಿ ದೈಹಿಕ ಚಟುವಟಿಕೆಗಳು ಇಲ್ಲವಾಗಿದೆ. ಪರಿಣಾಮ ಚಿಕ್ಕ ವಯಸ್ಸಿನಲ್ಲೇ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ದೈಹಿಕ ಚಟುವಟಿಕೆಗಳಿಂದ ಮಾತ್ರ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ಕ್ರೀಡಾ ಚಟುವಟಿಕೆಗಳು ಮನಸ್ಸಿಗೆ ಮುದ ನೀಡುತ್ತವೆ ಎಂದು ಹೇಳಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾ ಸಂಯೋಜಕ ದಿನೇಶ್ ಕುಮಾರ್ ಶೆಟ್ಟಿ , ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ ಬಿ.ಜಗದೀಶ್ ಶೆಟ್ಟಿ, ಖಜಾಂಚಿ ಪ್ರದೀಪ್ ಕುಮಾರ್, ಪ್ರಾಂಶುಪಾಲ ಸಂದೀಪ್ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕ ಮಂಜುನಾಥ್ ಜೋಗಿ ಉಪಸ್ಥಿತರಿದ್ದರು.

ADVERTISEMENT

ವಿದ್ಯಾರ್ಥಿ ಮುಖಂಡರಾದ ಮೇಧಾ ಸ್ವಾಗತಿಸಿದರು, ಪ್ರಹಲ್ಯಾ ಮಥಾಯಸ್ ಕಾರ್ಯಕ್ರಮ ನಿರ್ವಹಿಸಿದರು, ಇನಾ ರಾಬಿನ್ಸನ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.