ADVERTISEMENT

ಸಾರಾ ಅಬೂಬಕ್ಕರ್‌ಗೆ ನುಡಿನಮನ

​ಪ್ರಜಾವಾಣಿ ವಾರ್ತೆ
Published 17 ಜನವರಿ 2023, 3:07 IST
Last Updated 17 ಜನವರಿ 2023, 3:07 IST
ಖ್ಯಾತ ಲೇಖಕಿ ನಾಡೋಜ ಸಾರಾ ಅಬೂಬಕ್ಕರ್ ಅವರಿಗೆ ನುಡಿನಮನ ಸಲ್ಲಿಸಲಾಯಿತು
ಖ್ಯಾತ ಲೇಖಕಿ ನಾಡೋಜ ಸಾರಾ ಅಬೂಬಕ್ಕರ್ ಅವರಿಗೆ ನುಡಿನಮನ ಸಲ್ಲಿಸಲಾಯಿತು   

ಸುರತ್ಕಲ್: ಈಚೆಗೆ ನಿಧನರಾದ ಲೇಖಕಿ ಸಾರಾ ಅಬೂಬಕ್ಕರ್ ಅವರಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗ ಮತ್ತು ಕನ್ನಡ ವಿಭಾಗದ ಆಶ್ರಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪ್ರಾಂಶುಪಾಲ ಪ್ರೊ.ಪಿ. ಕೃಷ್ಣಮೂರ್ತಿ ನುಡಿನಮನವನ್ನು ಸಲ್ಲಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ದೀಪಾ ಶೆಟ್ಟಿ ಮತ್ತು ವಿದ್ಯಾರ್ಥಿನಿ ಎಸ್.ಎಂ. ತೃಪ್ತಿ, ಸಾರಾ ಅಬೂಬಕ್ಕರ್ ಅವರ ಕೃತಿಗಳನ್ನು ಪರಿಚಯಿಸಿದರು. ಗ್ರಂಥಪಾಲಕಿ ಸಾವಿತ್ರಿ ಎ. ಸ್ವಾಗತಿಸಿದರು. ಶರ್ಮಿತಾ ವಂದಿಸಿದರು. ಚಂದ್ರಶೇಖರ್ ಕೆ, ಸುಮನ್, ಸಾಕ್ಷಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT