ADVERTISEMENT

ಪುನೀತ್‌ಗೆ ರಾಜ್ಯೋತ್ಸವ ಪ್ರಶಸ್ತಿಗೆ ಆಗ್ರಹ ಕೇಳಿಬಂದಿತ್ತು: ಸುನಿಲ್ ಕುಮಾರ್

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2021, 6:36 IST
Last Updated 1 ನವೆಂಬರ್ 2021, 6:36 IST
   

ಉಡುಪಿ: ನಟ ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಆದರೆ ನಿಯಮಾವಳಿ ಹಾಗೂ ನ್ಯಾಯಾಲಯದ ಆದೇಶದ ಪ್ರಕಾರ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಲು ಅವಕಾಶ ಇಲ್ಲವಾದ್ದರಿಂದ ಪುನೀತ್ ಹೆಸರನ್ನು ಪ್ರಶಸ್ತಿಗೆ ಪರಿಗಣಿಸಲಾಗಲಿಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಪುನೀತ್ ಸರ್ಕಾರದ ಜಾಹೀರಾತುಗಳಲ್ಲಿ ಉಚಿತವಾಗಿ ನಟಿಸಿದ್ದಾರೆ. ಅವರ ಸೇವೆ ಪರಿಗಣಿಸಿ ಮುಂದೆ, ಯಾವ ರೀತಿಯ ಗೌರವ ಸಲ್ಲಿಸಬೇಕು ಎಂದು ಸರ್ಕಾರ ಶೀಘ್ರವೇ ನಿರ್ಧರಿಸಲಿದೆ ಎಂದು ಸಚಿವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT