ಉಡುಪಿ: ಮಠ ಹಾಗೂ ದೇವಸ್ಥಾನಗಳ ಮಧ್ಯೆ ಸಂಘರ್ಷ ಇರಬಾರದು, ಬದಲಾಗಿ ಸೌಹಾರ್ದ ವಾತಾವರಣ ಇರಬೇಕು. ಅದಕ್ಕಾಗಿ ಶುಕ್ರವಾರ ಮಧ್ಯಾಹ್ನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಮಾತುಕತೆ ನಡೆಸಲಾಗುವುದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ತಿಳಿಸಿದರು.
ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸುಬ್ರಹ್ಮಣ್ಯ ಮಠ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರೊಂದಿಗೆ ವಿವಾದ ಸಂಬಂಧ ಚರ್ಚಿಸಲಾಗುವುದು. ಸಾಮರಸ್ಯ ಬೆಳೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೇಜಾವರ ಶ್ರೀಗಳು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.