ಉಡುಪಿ: ಮಲ್ಪೆ ಬೀಚ್ನಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನು ಲೈಫ್ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಬೆಂಗಳೂರಿನ ನಾಗಸಂದ್ರದ ಪ್ರದೀಪ್, ನಾಗೇಶ್ ವೆಂಕಟೇಶನ್ ಹಾಗೂ ರಮೇಶ್ ಪ್ರಾಣಾಪಾಯದಿಂದ ಪಾರಾದವರು. ಮೂವರು ಪ್ರವಾಸಕ್ಕೆ ಬಂದು ನೀರಿಗಿಳಿದು ಈಜುವಾಗ ಅಲೆಗಳ ಸೆಳೆತಕ್ಕೆ ಸಿಲುಕಿ ಮುಳುಗುತ್ತಿದ್ದರು. ಇದನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ ತಕ್ಷಣ ನೆರವಿಗೆ ಧಾವಿಸಿ ರಕ್ಷಣೆ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.