ADVERTISEMENT

ಪ್ರವಾಸಿಗ ಮರವಂತೆ ಸಮುದ್ರ ಪಾಲು

​ಪ್ರಜಾವಾಣಿ ವಾರ್ತೆ
Published 18 ಜುಲೈ 2023, 16:06 IST
Last Updated 18 ಜುಲೈ 2023, 16:06 IST

ಬೈಂದೂರು: ಮರವಂತೆ ಬೀಚ್‌ನಲ್ಲಿ ಪ್ರವಾಸಿಗರೊಬ್ಬರು ಸಮುದ್ರ ಪಾಲಾಗಿದ್ದಾರೆ. ಗದಗ ಜಿಲ್ಲೆಯ ಮೇವಂಡಿ ಗ್ರಾಮದ ಪೀರ್ ನದಾಫ್ ನಾಪತ್ತೆಯಾದವರು.

ಮಳೆಗಾಲದಲ್ಲಿ ಕಡಲು ಪ್ರಕ್ಯುಬ್ಧಗೊಂಡಿದ್ದರೂ ಲೆಕ್ಕಿಸದೆ ಸಮುದ್ರಕ್ಕಿಳಿದಿದ್ದ ಪೀರ್ ನದಾಫ್‌ ಅಲೆಗಳ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಸ್ಥಳೀಯರ ಸಹಕಾರದೊಂದಿಗೆ ಬೈಂದೂರು ಅಗ್ನಿಶಾಮಕ ದಳದ ಸಿಬ್ಬಂದಿ, ಗಂಗೊಳ್ಳಿ ಠಾಣೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT