
ಉಡುಪಿ: ತುಳುನಾಡಿನಲ್ಲಿ ತುಳು ನಾಟಕವು ಚಳುವಳಿ ರೂಪದಲ್ಲಿಯೇ ಆರಂಭವಾಗಿತ್ತು.1910ನೇ ಇಸವಿಯಲ್ಲಿಯೇ ತುಳು ನಾಟಕ ಕೂಟವನ್ನು ಕಟ್ಟಿಕೊಂಡು ಜನಜಾಗೃತಿ ಮೂಡಿಸುವ ಕೆಲಸ ಮಾಡಲಾಗಿತ್ತು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ತಿಳಿಸಿದರು.
ನಗರದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ತುಳುಕೂಟ ಉಡುಪಿ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಜಂಟಿ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 24ನೇ ವರ್ಷದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ಕೆಮ್ತೂರು ತುಳು ನಾಟಕ ಪರ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತುಳು ಕೂಟದ ಸ್ಥಾಪಕ ಅಧ್ಯಕ್ಷ ಭಾಸ್ಕರಾನಂದ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ,ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ವನಿತಾ ಮಯ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ನಾಗೇಶ್ ಕುಮಾರ್ ಉದ್ಯಾವರ, ಉಪಾಧ್ಯಕ್ಷ ದಿವಾಕರ ಸನಿಲ್, ಶೋಭಾ ಶೆಟ್ಟಿ, ವಿಜಯ್ ಕುಮಾರ್ ಶೆಟ್ಟಿ, ಚೈತನ್ಯ ಎಂ.ಜಿ., ವಿಶ್ವನಾಥ ಶೆಣೈ ಉಪಸ್ಥಿತರಿದ್ದರು.
ಕೆಮ್ತೂರು ನಾಟಕ ಸ್ಪರ್ಧೆಯ ಸಂಚಾಲಕ ಕೆ.ಪ್ರಭಾಕರ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಉಪಾಧ್ಯಕ್ಷ ಭುವನ ಪ್ರಸಾದ್ ಹೆಗ್ಡೆ ಸ್ವಾಗತಿಸಿದರು. ಕಾರ್ಯದರ್ಶಿ ಗಂಗಾಧರ ಕಿದಿಯೂರು ವಂದಿಸಿದರು. ವಿ.ಕೆ.ಯಾದವ್ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಕಲಾಮಂದಿರ ಉಡುಪಿ ಇವರಿಂದ ಪ್ರಥಮ ದಿನದ ನಾಟಕ ‘ಪಿಲಿ’ ಪ್ರದರ್ಶನಗೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.