ADVERTISEMENT

ಬ್ರಹ್ಮಾವರ: ಮಡಿಸಾಲು ಹೊಳೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವು

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2021, 13:12 IST
Last Updated 20 ಅಕ್ಟೋಬರ್ 2021, 13:12 IST
ಮೃತ ವಿದ್ಯಾರ್ಥಿಗಳು ಆನಸ್(ಎಡ), ಶ್ರೇಯಸ್ (ಬಲ)
ಮೃತ ವಿದ್ಯಾರ್ಥಿಗಳು ಆನಸ್(ಎಡ), ಶ್ರೇಯಸ್ (ಬಲ)   

ಬ್ರಹ್ಮಾವರ: ತಾಲ್ಲೂಕಿನ ಹೆರಂಜೆ ಬಳಿಯ ಮಡಿಸಾಲು ಹೊಳೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿದ್ದಾರೆ.

ಬ್ರಹ್ಮಾವರದ ಆನಸ್‌ (16) ಹಾಗೂ ಚಾಂತಾರಿನ ಶ್ರೇಯಸ್‌ (18) ಮೃತರು. ಮಂಗಳವಾರ ಮಧ್ಯಾಹ್ನ ಸ್ನೇಹಿತ ಸಂಜಯರಾಜ್‌ ಜತೆ ಹೊಳೆಯಲ್ಲಿ ಈಜಲು ಹೋಗಿದ್ದಾಗ ಶ್ರೇಯಸ್‌ ಹಾಗೂ ಆನಸ್‌ ಮುಳುಗಿದ್ದರು. ರಾತ್ರಿಯಾದರೂ ಮಕ್ಕಳು ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದರು.

ತನಿಖೆ ಆರಂಭಿಸಿದ ಪೊಲೀಸರಿಗೆ ನದಿಯ ದಡದಲ್ಲಿ ಶ್ರೇಯಸ್‌ ಮತ್ತು ಆನಸ್‌ನ ಬ್ಯಾಗ್‌ ಸಿಕ್ಕಿತ್ತು. ಈ ಸಂಬಂಧಸ್ನೇಹಿತ ಸಂಜಯರಾಜ್‌ನನ್ನು ವಿಚಾರಿಸಿದಾಗ ನದಿಯಲ್ಲಿ ಮುಳುಗಿರುವ ವಿಚಾರ ಬೆಳಕಿಗೆ ಬಂತು. ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ನದಿಯಲ್ಲಿ ಶೋಧ ನಡೆಸಿದಾಗ ಬುಧವಾರ ಮೃತದೇಹಗಳು ಸಿಕ್ಕಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.