ಉಡುಪಿ: ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತಾಧಿಕಾರಿಯಾಗಿರುವ ಡಾ.ಸುಧಾ ಅವರ ನಿವಾಸದ ಮೇಲೆ ಶನಿವಾರ ರಾಜ್ಯದ ಹಲವು ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಸುಧಾ ಅವರ ಸಂಬಂಧಿಗಳು ನೆಲೆಸಿರುವ ಬ್ರಹ್ಮಾವರದ ಚಾಂತಾರು ಹಾಗೂ ಬಾರ್ಕೂರಿನ ನಿವಾಸಗಳಲ್ಲೂ ಅಧಿಕಾರಿಗಳು ಶೋಧ ನಡೆಸಿದರು.
ಸುಧಾ ಅವರ ಪತಿ ಉಡುಪಿಯವರಾಗಿರುವುದರಿಂದ ಪತಿಯ ಸಂಬಂಧಿಗಳು ಹಾಗೂ ಆಪ್ತರ ಮನೆಯಲ್ಲಿ ಅಧಿಕಾರಿಗಳು ತೀವ್ರ ಶೋಧ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದರು. ಸುಧಾ ಅವರು ಕೆಲ ಸಮಯ ಉಡುಪಿಯಲ್ಲೂ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಜಿಲ್ಲೆಯಲ್ಲಿ ಆಸ್ತಿ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.