ಉಡುಪಿ: ಯಕ್ಷಗಾನ ಕಲಾರಂಗದ ಸಕ್ರಿಯ, ಹಿರಿಯ ಕಾರ್ಯಕರ್ತರಿಗೆ ವಿಜಯ ಕುಮಾರ್ ಮುದ್ರಾಡಿ ಅವರು ಸ್ಥಾಪಿಸಿರುವ ಯಕ್ಷಚೇತನ ಪ್ರಶಸ್ತಿಯನ್ನು ಈ ಬಾರಿ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಅಧಿಕಾರಿ, ಸಂಸ್ಥೆಯ ಕೋಶಾಧಿಕಾರಿ ಕೆ.ಮನೋಹರ ಅವರಿಗೆ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಳಿ ಕಡೆಕಾರ್ ತಿಳಿಸಿದ್ದಾರೆ.
ನಿಡಂಬೂರು ಯುವಕ ಮಂಡಲ ಅಧ್ಯಕ್ಷರಾಗಿ, ಕುತ್ಪಾಡಿ ಯಕ್ಷಗಾನ ಮಂಡಳಿಯಲ್ಲಿ ವೇಷಧಾರಿಯಾಗಿ ಹಾಗೂ ಯಕ್ಷಗಾನ ಕಲಾರಂಗದಲ್ಲಿ 7 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮನೋಹರ ಅವರಿಗೆ ನ.28ರಂದು ಕೃಷ್ಣಮಠದ ರಾಜಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.