ADVERTISEMENT

ಖಾಸಗಿ ಬಸ್‌ನ ನಿರ್ವಾಹಕನಿಗೆ ಮನಬಂದಂತೆ ಥಳಿಸಿದ ಯುವಕರ ಗುಂಪು

​ಪ್ರಜಾವಾಣಿ ವಾರ್ತೆ
Published 2 ಜುಲೈ 2019, 11:04 IST
Last Updated 2 ಜುಲೈ 2019, 11:04 IST
   

ಉಡುಪಿ: ಶಿವಮೊಗ್ಗ–ಉಡುಪಿ ಮಧ್ಯೆ ಸಂಚರಿಸುವ ಖಾಸಗಿ ಬಸ್‌ನ ನಿರ್ವಾಹಕನಿಗೆ ಯುವಕರ ಗುಂಪೊಂದು ಮನಬಂದಂತೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದೆ.

ಕಾರಿಗೆ ಜಾಗ ಬಿಡಲಿಲ್ಲ ಎಂಬ ಕಾರಣಕ್ಕೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಯುವಕರ ತಂಡ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮಂಡಗದ್ದೆ ಬಳಿ ಬಸ್‌ ಅನ್ನು ಅಡಗಟ್ಟಿ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದೆ. ಹಲ್ಲೆಯ ದೃಶ್ಯ ಬಸ್‌ನೊಳಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಜೂನ್ 30ರಂದು ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಈ ಸಂಬಂಧ ಮಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.