ADVERTISEMENT

ಚಿಕಿತ್ಸೆಗೆ ಬಂದಿದ್ದ ದಾವಣಗೆರೆಯ ಸೋಂಕಿತ ವೃದ್ಧ ಸಾವು

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 13:58 IST
Last Updated 12 ಜುಲೈ 2020, 13:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ದಾವಣಗೆರೆಯಿಂದ ಮಣಿಪಾಲಕ್ಕೆ ಚಿಕಿತ್ಸೆ ಪಡೆಯಲು ಬಂದಿದ್ದ ಕೋವಿಡ್‌ ಸೋಂಕಿತ ವೃದ್ಧರೊಬ್ಬರು ಶುಕ್ರವಾರ ರಾತ್ರಿ ಮೃತಪಟ್ಟಿರುವುದನ್ನು ವೈದ್ಯಾಧಿಕಾರಿ ಭಾನುವಾರ ದೃಢಪಡಿಸಿದ್ದಾರೆ.

ಹೃದ್ರೋಗ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ 70 ವರ್ಷ ವಯಸ್ಸಿನ ವ್ಯಕ್ತಿಯನ್ನು ಸಂಬಂಧಿಕರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿ ಕೋವಿಡ್‌ ಪರೀಕ್ಷೆ ನಡೆಸಿದಾಗ ಸೋಂಕು ಇರುವುದು ದೃಢಪಟ್ಟಿತ್ತು. ವೃದ್ಧರನ್ನು ಉಡುಪಿಯ ಡಾ.ಟಿಎಂಎ ಪೈ ಕೋವಿಡ್‌ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ವೃದ್ಧ ಮೃತಪಟ್ಟಿದ್ದಾರೆ.

ಕೋವಿಡ್‌ ಮಾರ್ಗಸೂಚಿಯಂತೆ ಭಾನುವಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸುಧೀರ್ ಚಂದ್ರ ಸೂಡ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.