ಉಡುಪಿ ಜಿಲ್ಲೆಯ ಶಿರ್ವದ ರವಿ ಕಟಪಾಡಿ ಪ್ರತಿ ಅಷ್ಟಮಿಗೆ ವೇಷ ಹಾಕಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುತ್ತಾರೆ. ಸಂಗ್ರಹವಾದ ದೇಣಿಗೆಯನ್ನು ಬಡ ಮಕ್ಕಳ ಚಿಕಿತ್ಸಾ ವೆಚ್ಚ ಭರಿಸಲು ಬಳಸುತ್ತಾರೆ.
7 ವರ್ಷಗಳಿಂದ ವೇಷ ಹಾಕುತ್ತಾ ಬಂದಿರುವ ರವಿ ಕಟಪಾಡಿ ಸುಮಾರು 79 ಲಕ್ಷ ರೂಪಾಯಿ ದೇಣಿಗೆ ಸಂಗ್ರಹಿಸಿ 44 ಮಕ್ಕಳ ಚಿಕಿತ್ಸೆಗೆ ಧನ ಸಹಾಯ ಮಾಡಿದ್ದಾರೆ. ಸ್ವತಃ ಆರ್ಥಿಕ ಸಂಷ್ಟದಲ್ಲಿದ್ದರೂ ರವಿ ಕಟಪಾಡಿ ಅವರ ಹೃದಯ ಶ್ರೀಮಂತಿಕೆಯನ್ನು ಕರಾವಳಿಗರು ಮೆಚ್ಚಿಕೊಂಡಿದ್ದು ಸಮಾಜಮುಖಿ ಕಾರ್ಯಕ್ಕೆ ನೆರವು ನೀಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.