ADVERTISEMENT

ಕೆವೈಸಿ ವಂಚನೆ: ₹ 3,99,989 ನಗದು ಕಳೆದುಕೊಂಡ ವ್ಯಕ್ತಿ

​ಪ್ರಜಾವಾಣಿ ವಾರ್ತೆ
Published 23 ಜೂನ್ 2023, 8:21 IST
Last Updated 23 ಜೂನ್ 2023, 8:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ಕೆವೈಸಿ ಅಪ್‌ಡೇಟ್ ಮಾಡಲು ಹೋಗಿ ವಂಚಕರ ಜಾಲಕ್ಕೆ ಸಿಲುಕಿದ ವ್ಯಕ್ತಿಯೊಬ್ಬರು ₹3,99,989 ಕಳೆದುಕೊಂಡಿದ್ದಾರೆ. ಡೇವಿಡ್ ಅಶೋಕ್ ರೋಡ್ರಿಗಸ್ ಹಣ ಕಳೆದುಕೊಂಡವರು.

ಈಚೆಗೆ ಡೇವಿಡ್‌ ಮೊಬೈಲ್‌ಗೆ ಕೆವೈಸಿ ಅಪ್‌‌ಡೇಟ್ ಮಾಡುವಂತೆ ಸಂದೇಶ ಬಂದಿದ್ದು ಬ್ಯಾಂಕ್ ಅಧಿಕಾರಿಗಳೇ ಕಳಿಸಿರಬಹುದು ಎಂದು ನಂಬಿ  ಸಂದೇಶ ಕಳಿಸಿದ ವ್ಯಕ್ತಿಗೆ ಕರೆ ಮಾಡಿದ್ದಾರೆ. ಕೆನರಾ ಬ್ಯಾಂಕ್ ಮುಖ್ಯ ಕಚೇರಿಯಿಂದ ಮಾತನಾಡುತ್ತಿರುವುದಾಗಿ ನಂಬಿಸಿ ವಂಚಕ ಬ್ಯಾಂಕ್ ಖಾತೆಯ ಕೆವೈಸಿ ಅಪ್‌‌ಡೇಟ್ ಮಾಡದಿದ್ದರೆ ಖಾತೆ ಬ್ಲಾಕ್ ಆಗುತ್ತದೆ ಎಂದು ಹೆದರಿಸಿ 4 ಬಾರಿ ಮೊಬೈಲ್‌ಗೆ ಬಂದ ಒಟಿಪಿ ಪಡೆದು ಕ್ರಮವಾಗಿ ₹99,999, ₹99,999, ₹99,997, ₹99,994 ಹಣವನ್ನು ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಉಡುಪಿ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.