ADVERTISEMENT

ಉಡುಪಿ: ಮಾಳ–ಕುದುರೆಮುಖ ಹೆದ್ದಾರಿ 2 ದಿನ ಬಂದ್

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 9:37 IST
Last Updated 21 ಸೆಪ್ಟೆಂಬರ್ 2020, 9:37 IST

ಉಡುಪಿ: ಕಾರ್ಕಳ ತಾಲ್ಲೂಕಿನ ಮಾಳ–ಕುದುರೆಮುಖ ರಾಷ್ಟ್ರೀಯ ಹೆದ್ದಾರಿ 169ರಲ್ಲಿ 2 ದಿನ ವಾಹನಗಳ ಸಂಚಾರ ಬಂದ್‌ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿದ್ದಾರೆ.

ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮಾಳ–ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಮಣ್ಣು ರಸ್ತೆಗೆ ಬೀಳುತ್ತಿದೆ. ಬೃಹತ್ ಗಾತ್ರದ ಮರಗಳು ರಸ್ತೆಗೆ ಬಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ವಾಹನಗಳ ಸಂಚಾರದಿಂದ ಸಾರ್ವಜನಿಕರ ಪ್ರಾಣಕ್ಕೆ ತೊಂದರೆಯಾಗುವ ಸಾದ್ಯತೆ ಹೆಚ್ಚಾಗಿರುವುದರಿಂದ ಸೆ. 21 ಹಾಗೂ 22ರಂದು ಮಾಳ–ಕುದುರೆಮುಖ ಹೆದ್ದಾರಿ ಬಂದ್‌ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT