ADVERTISEMENT

ವೈಯಕ್ತಿಕ ದ್ವೇಷದ ಹಿನ್ನೆಲೆ ಜೋಡಿ ಕೊಲೆ: 7 ಮಂದಿ ಆರೋಪಿಗಳ ಬಂಧನ 

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2019, 6:59 IST
Last Updated 8 ಫೆಬ್ರುವರಿ 2019, 6:59 IST
ರಾಘವೇಂದ್ರ ಕಾಂಚನ್
ರಾಘವೇಂದ್ರ ಕಾಂಚನ್    

ಉಡುಪಿ: ಕೋಟದ ಮಾಣೂರಿನಲ್ಲಿ ಈಚೆಗೆ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಕೋಟ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್ ಸೇರಿದಂತೆ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಜಶೇಖರ ರೆಡ್ಡಿ, ಮೆಡಿಕಲ್ ರವಿ, ಹರೀಶ್ ರೆಡ್ಡಿ, ಮಹೇಶ ಗಾಣಿಗ, ರವಿಚಂದ್ರ ಪೂಜಾರಿ, ರವಿ ಬಂಧಿತರು.

ವೈಯಕ್ತಿಕ ದ್ವೇಷ ಕೊಲೆಗೆ ಕಾರಣ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ADVERTISEMENT

ಜ.27 ರಂದು ಭರತ್ ಹಾಗೂ ಯತೀಶ್ ಎಂಬುವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.