ADVERTISEMENT

ಉಡುಪಿ | ರೈಲ್ವೆ ಯಾತ್ರಿ ಸಂಘ: ಅಧ್ಯಕ್ಷರಾಗಿ ಧೀರಜ್ ಶಾಂತಿ

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 14:30 IST
Last Updated 22 ಜೂನ್ 2025, 14:30 IST
ರೈಲ್ವೆ ಯಾತ್ರಿ ಸಂಘದ ವಾರ್ಷಿಕ ಮಹಾಸಭೆ ಉಡುಪಿಯ ಹಿಂದಿ ಪ್ರಚಾರ ಸಮಿತಿ ಸಭಾಂಗಣದಲ್ಲಿ ಭಾನುವಾರ ನಡೆಯಿತು
ರೈಲ್ವೆ ಯಾತ್ರಿ ಸಂಘದ ವಾರ್ಷಿಕ ಮಹಾಸಭೆ ಉಡುಪಿಯ ಹಿಂದಿ ಪ್ರಚಾರ ಸಮಿತಿ ಸಭಾಂಗಣದಲ್ಲಿ ಭಾನುವಾರ ನಡೆಯಿತು   

ಉಡುಪಿ: ರೈಲ್ವೆ ಯಾತ್ರಿ ಸಂಘದ ವಾರ್ಷಿಕ ಮಹಾಸಭೆ ಉಡುಪಿಯ ಹಿಂದಿ ಪ್ರಚಾರ ಸಮಿತಿ ಸಭಾಂಗಣದಲ್ಲಿ ಉಪಾಧ್ಯಕ್ಷ ಅಜಿತ್ ಕುಮಾರ್ ಶೆಣೈ ಅಧ್ಯಕ್ಷತೆಯಲ್ಲಿ ಭಾನುವಾರ ನಡೆಯಿತು.

2025-27ನೇ ಸಾಲಿನ ಅಧ್ಯಕ್ಷರಾಗಿ ಧೀರಜ್ ಶಾಂತಿ ಅವರನ್ನು ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಮಧುಸೂದನ್ ಹೇರೂರು, ಕೋಶಾಧಿಕಾರಿಯಾಗಿ ಅಜಿತ್ ಕುಮಾರ್ ಶೆಣೈ ಉದ್ಯಾವರ ಅವರನ್ನು ನೇಮಿಸಲಾಯಿತು. ಕಾರ್ಯದರ್ಶಿಯಾಗಿ ಮಂಜುನಾಥ ಮಣಿಪಾಲ್ ಅವರನ್ನು ಮುಂದುವರಿಸಲಾಯಿತು.

ನಿರ್ದೇಶಕರಾಗಿ ಜಾನ್ ರೆಬೆಲ್ಲೊ, ಸದಾನಂದ ಅಮೀನ್, ಜನಾರ್ದನ್ ಕೋಟ್ಯಾನ್, ಜಯಚಂದ್ರ ರಾವ್, ಪ್ರಭಾಕರ್ ಆಚಾರ್ಯ, ರತ್ನ ಶ್ರೀ ಆಚಾರ್ಯ, ಶ್ರೀನಿವಾಸ್ ಶೆಟ್ಟಿ ತೊನ್ಸೆ, ಸಿ.ಎಸ್.ರಾವ್, ವೆಂಕಟರಾಜ್ ಭಟ್, ರವಿ ಪೂಜಾರಿ ಹಿರಿಯಡ್ಕ, ಪಿ.ಅಪ್ರಾಯ ಶೆಟ್ಟಿಗಾರ್, ಪ್ಲಾಸಿಡ್ ಜೆ.ಪಿ., ನಾರಾಯಣ್ ಕಾಂಚನ್, ರಘುರಾಮ್ ನಾಯಕ್, ಪಿ.ಎನ್.‌ರವೀಂದ್ರ, ರವೀಶ್ ಕೋಟ್ಯಾನ್, ಸತೀಶ್ ಪೂಜಾರಿ, ದಿನೇಶ್ ಅಮೀನ್ ಕದಿಕೆ ಆಯ್ಕೆಯಾದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.