ಉಡುಪಿ: ಹಿರಿಯ ಸಾಹಿತಿ ಹಾಗೂ ವಿದ್ವಾಂಸ ಡಾ.ಉಪ್ಪಂಗಳ ರಾಮ ಭಟ್ಟ (81) ಮಂಗಳವಾರ ನಿಧನರಾದರು.
ಮೃತರಿಗೆ ಪತ್ನಿ ಶಂಕರಿ ಆರ್.ಭಟ್ ಹಾಗೂ ಓರ್ವ ಪುತ್ರ ಇದ್ದಾರೆ. ಎಂಜಿಎಂ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕರಾಗಿದ್ದ ಡಾ.ಉಪ್ಪಂಗಳ ರಾಮಭಟ್ಟರು ಶ್ರೇಷ್ಠ ವ್ಯಾಕರಣ ವಿದ್ವಾಂಸರಾಗಿದ್ದರು. ಕನ್ನಡ ಸಾಹಿತ್ಯಲೋಕಕ್ಕೆ ಹಲವು ಕೃತಿಗಳನ್ನು ನೀಡಿದ್ದಾರೆ. 1986ರಲ್ಲಿ ಅಕಲಂಕ ಪ್ರತಿಷ್ಠಾನ ಸ್ಥಾಪಿಸಿ ಹಲವು ಕೃತಿಗಳನ್ನು ಹೊರತಂದಿದ್ದರು. ಶ್ರೇಷ್ಠ ಕೃತಿಗಳನ್ನು ಗುರುತಿಸಿ ಪ್ರತಿವರ್ಷ ‘ಅಕಲಂಕ ಪ್ರಶಸ್ತಿ’ ನೀಡಿ ಗೌರವಿಸುತ್ತಾ ಬಂದಿದ್ದರು.
ಉಪ್ಪಂಗಳ ಅವರ ಸಾಹಿತ್ಯ ಕೃಷಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಡಾ.ಹಾ.ಮಾ.ನಾ ದತ್ತಿ ಪ್ರಶಸ್ತಿ, ಅತ್ತಿಮಬ್ಬೆ ಪ್ರತಿಷ್ಠಾನದ ರನ್ನ ಸಾಹಿತ್ಯ ಪ್ರಶಸ್ತಿ, ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗಳು ಸಂದಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.