ADVERTISEMENT

ಉಡುಪಿ | ಬೀದಿ ನಾಯಿಗಳಿಗೆ ಎಲ್ಲೆಂದರಲ್ಲಿ ಆಹಾರ ಹಾಕುವಂತಿಲ್ಲ: ಪೌರಾಯುಕ್ತ ಮಹೇಶ್​

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2025, 7:16 IST
Last Updated 1 ಅಕ್ಟೋಬರ್ 2025, 7:16 IST
ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಸೋಮವಾರ ಸಭೆ ಜರುಗಿತು
ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಸೋಮವಾರ ಸಭೆ ಜರುಗಿತು   

ಉಡುಪಿ: ಸುಪ್ರೀಂ ಕೋರ್ಟ್​ ಸೂಚನೆ ಪ್ರಕಾರ ನಗರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಎಲ್ಲೆಂದರಲ್ಲಿ ಆಹಾರ ಹಾಕುವುದನ್ನು ನಿಷೇಧಿಸಲಾಗುತ್ತಿದ್ದು, ಆಹಾರವನ್ನು ಹಾಕುವ ಸ್ಥಳವನ್ನು ನಿಗದಿಪಡಿಸಿ ಫಲಕ​ ಹಾಕಲಾಗುವುದು ಎಂದು ಪೌರಾಯುಕ್ತ ಮಹೇಶ್​ ಹಂಗರಗಿ ತಿಳಿಸಿದರು.

ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಎಬಿಸಿ ಕಾರ್ಯಕ್ರಮವನ್ನು ಸ್ಥಳೀಯ ಎನ್​ಜಿಒ ಜೊತೆ ಸೇರಿ ಅನುಷ್ಠಾನಗೊಳಿಸಲಾಗುವುದು ಎಂದರು.

ADVERTISEMENT

ಪರಿಸರ ಇಂಜಿನಿಯರ್​ ರವಿಪ್ರಕಾಶ್​ ಮಾತನಾಡಿ, ಮಕ್ಕಳು, ಹಿರಿಯ ನಾಗರಿಕರಿಗೆ ಬೀದಿನಾಯಿಗಳಿಂದ ಬಹಳಷ್ಟು ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಸಲ್ಲಿಕೆಯಾಗಿವೆ ಎಂದರು.

ನಗರಸಭಾ ಸದಸ್ಯ ಗಿರೀಶ್​ ಅಂಚನ್​ ಮಾತನಾಡಿ, ನಗರಸಭೆ ಸುತ್ತಮುತ್ತ ಎರಡಕ್ಕಿಂತ ಹೆಚ್ಚು ನಾಯಿಗಳನ್ನು ಸಾಕುತ್ತಿರುವವರು ನೋಂದಣಿ ಮಾಡಿಕೊಳ್ಳುವಂತೆ ನಿಯಮ ರೂಪಿಸಬೇಕು ಎಂದು ಸಲಹೆ ನೀಡಿದರು.

ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ರೆಡ್ಡಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯಕೊಡವೂರು, ಜಿ.ಟಿ. ಹೆಗ್ಡೆ, ಮಂಜುನಾಥ್​ ಮಣಿಪಾಲ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.