ADVERTISEMENT

ಯಕ್ಷಗಾನ ಕಲಾವಿದ ಜಂಬೂರು ರಾಮಚಂದ್ರ ಶಾನುಭಾಗ್ ನಿಧನ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2023, 10:50 IST
Last Updated 5 ಫೆಬ್ರುವರಿ 2023, 10:50 IST
ಜಂಬೂರು ರಾಮಚಂದ್ರ ಶಾನುಭಾಗ್
ಜಂಬೂರು ರಾಮಚಂದ್ರ ಶಾನುಭಾಗ್   

ಉಡುಪಿ: ಉಡುಪಿಯ ಶಿರಿಯಾರದವರಾದ ಯಕ್ಷಗಾನ ಕಲಾವಿದ ಜಂಬೂರು ರಾಮಚಂದ್ರ ಶಾನುಭಾಗ್ (84) ಭಾನುವಾರ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು , ಓರ್ವ ಪುತ್ರಿ ಇದ್ದಾರೆ.

ಮಂದಾರ್ತಿ, ಮಾರಣಕಟ್ಟೆ, ಅಮೃತೇಶ್ವರಿ, ಇಡಗುಂಜಿ, ಪೆರ್ಡೂರು, ಹಾಲಾಡಿ, ಗುಂಡುಬಾಳ, ಕಮಲಶಿಲೆ ಮೇಳದಲ್ಲಿ ಐದೂವರೆ ದಶಕಗಳ ಕಾಲ ಕಲಾಸೇವೆಗೈದಿದ್ದರು ರಾಮಚಂದ್ರ ಶಾನುಭಾಗ್‌.

ಉಡುಪಿಯ ಯಕ್ಷಗಾನ ಕಲಾರಂಗ ಸೇರಿದಂತೆ ಹಲವು ಸಂಸ್ಥೆಗಳು ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.