ADVERTISEMENT

ಕೊಲ್ಲೂರಿಗೆ ಕೇಂದ್ರ ಸಚಿವ ವಿ. ಮುರಳೀಧರನ್‌ ಭೇಟಿ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2019, 13:29 IST
Last Updated 12 ಸೆಪ್ಟೆಂಬರ್ 2019, 13:29 IST
ಕುಂದಾಪುರ ಸಮೀಪದ ಕೊಲ್ಲೂರಿನ ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ಕೇಂದ್ರ ಸಚಿವ ವಿ. ಮುರಳೀಧರನ್‌ ಅವರನ್ನು ಗುರುವಾರ ಗೌರವಿಸಲಾಯಿತು.
ಕುಂದಾಪುರ ಸಮೀಪದ ಕೊಲ್ಲೂರಿನ ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ಕೇಂದ್ರ ಸಚಿವ ವಿ. ಮುರಳೀಧರನ್‌ ಅವರನ್ನು ಗುರುವಾರ ಗೌರವಿಸಲಾಯಿತು.   

ಕುಂದಾಪುರ: ಕೊಲ್ಲೂರಿನ ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಗುರುವಾರ ಬೆಳಿಗ್ಗೆ ಭೇಟಿ ನೀಡಿದಕೇಂದ್ರ ವಿದೇಶಾಂಗ ವ್ಯವಹಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ. ಮುರಳೀಧರನ್‌ ಅವರು ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರು.

ಬುಧವಾರ ರಾತ್ರಿ ಪತ್ನಿ ಕೆ.ಎಸ್‌. ಜಯಶ್ರೀ ಅವರೊಂದಿಗೆ ಕೊಲ್ಲೂರಿಗೆ ಬಂದು ವಾಸ್ತವ್ಯ ಹೂಡಿದ್ದ ಅವರು, ಬೆಳಿಗ್ಗೆ ದೇವರ ದರ್ಶನ ಪಡೆದರು. ಸಚಿವರನ್ನು ದೇವಸ್ಥಾನದ ವತಿಯಿಂದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್‌ಕುಮಾರ ಶೆಟ್ಟಿ ಗೌರವಿಸಿದರು. ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT