ADVERTISEMENT

ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಗೆಲುವು: ಸಿ.ಎನ್. ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 8:29 IST
Last Updated 27 ನವೆಂಬರ್ 2020, 8:29 IST
ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ
ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ   

ಉಡುಪಿ: ಮಸ್ಕಿ ಹಾಗೂ ಬಸವಕಲ್ಯಾಣ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಹೇಳಿದರು.

ಉಡುಪಿಯಲ್ಲಿ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರಮುಖರನ್ನು ನಿಯೋಜನೆ ಮಾಡಲಾಗಿದೆ ಎಂದರು.

ಮಂಗಳೂರಲ್ಲಿ ಲಷ್ಕರ್ ಉಗ್ರ ಸಂಘಟನೆ ಪರವಾಗಿ ಗೋಡೆ ಬರಹ ಬರೆದಿರುವುದು ದೇಶ ವಿರೋಧಿ ಚಟುವಟಿಕೆ. ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ADVERTISEMENT

ಡಿ.ಕೆ.ಶಿವಕುಮಾರ್ ಅವರನ್ನು ಸಿಬಿಐ ಟಾರ್ಗೆಟ್ ಮಾಡುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಸಂದರ್ಭವೂ ಸಿಬಿಐ ತನಿಖೆ ನಡೆದಿದ್ದು, ಕಾಂಗ್ರೆಸ್ ಸಿಬಿಐ ಅನ್ನು ದುರುಪಯೋಗ ಮಾಡಿಕೊಂಡಿದೆಯೇ ಎಂದು ಕೇಳಬೇಕಾಗುತ್ತದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.