ADVERTISEMENT

ಬ್ರಹ್ಮಾವರ: ಯಕ್ಷಗಾನ ಪರಿಪೂರ್ಣ ಕಲಾ ಪ್ರಕಾರ

ಕಿಶೋರ ಯಕ್ಷಗಾನ ಸಂಭ್ರಮ ಸಮಾರೋಪದಲ್ಲಿ ಪ್ರಮೋದ ಮಧ್ವರಾಜ್‌

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2025, 7:20 IST
Last Updated 3 ಡಿಸೆಂಬರ್ 2025, 7:20 IST
ಬ್ರಹ್ಮಾವರ ಬಂಟರ ಭವನದಲ್ಲಿ ನಡೆದ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಮುಖಂಡ ಪ್ರಮೋದ್‌ ಮಧ್ವರಾಜ್‌, ಯಕ್ಷ ಶಿಕ್ಷಣ ಟ್ರಸ್ಟ್‌ ಸ್ಥಾಪಕಾಧ್ಯಕ್ಷ ರಘುಪತಿ ಭಟ್ ಭಾಗವಹಿಸಿದ್ದರು
ಬ್ರಹ್ಮಾವರ ಬಂಟರ ಭವನದಲ್ಲಿ ನಡೆದ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಮುಖಂಡ ಪ್ರಮೋದ್‌ ಮಧ್ವರಾಜ್‌, ಯಕ್ಷ ಶಿಕ್ಷಣ ಟ್ರಸ್ಟ್‌ ಸ್ಥಾಪಕಾಧ್ಯಕ್ಷ ರಘುಪತಿ ಭಟ್ ಭಾಗವಹಿಸಿದ್ದರು   

ಬ್ರಹ್ಮಾವರ: ‘ಪರಿಪೂರ್ಣ ಕಲೆಯಾದ ಯಕ್ಷಗಾನವು ಆಹಾರ್ಯ, ಆಂಗಿಕ, ವಾಚಿಕ, ಸಾತ್ವಿಕ ನಾಲ್ಕೂ ಅಂಶಗಳು ಪೂರ್ಣಪ್ರಮಾಣದಲ್ಲಿ ವಿಕಾಸ ಹೊಂದಿರುವ ಏಕೈಕ ಕಲಾ ಪ್ರಾಕಾರ. ಶಾಲೆಗೆ ಹೋಗದ ಯಕ್ಷಗಾನ ಕಲಾವಿದರು ಸಮಾಜ ತಿದ್ದುವ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡಿರುವುದು ಶ್ಲಾಘನೀಯ’ ಎಂದು ಮುಖಂಡ ಪ್ರಮೋದ ಮಧ್ವರಾಜ್‌ ಹೇಳಿದರು.

ಇಲ್ಲಿನ ಬಂಟರ ಭವನದ ವಠಾರದಲ್ಲಿ ಉಡುಪಿಯ ಯಕ್ಷ ಶಿಕ್ಷಣ ಟ್ರಸ್ಟ್‌, ಪ್ರದರ್ಶನಾ ಸಂಘಟನಾ ಸಮಿತಿ ಬ್ರಹ್ಮಾವರ ವತಿಯಿಂದ ಒಂದು ವಾರ ನಡೆದ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

ಯಕ್ಷ ಶಿಕ್ಷಣ ಟ್ರಸ್ಟ್‌ ಸ್ಥಾಪಕಾಧ್ಯಕ್ಷ ಕೆ. ರಘುಪತಿ ಭಟ್ ಅವರು, ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ಆರಂಭಿಸಲು ಕಾರಣವಾದ ಸಂಗತಿ, ಅದರ ಪ್ರಯೋಜನ ವಿವರಿಸಿದರು.  ಈ ಅಭಿಯಾನದ ಯಶಸ್ಸಿನಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಕೊಡುಗೆ ಅಗಾಧವಾಗಿದೆ ಎಂದು ಹೇಳಿದರು.

ADVERTISEMENT

ವಿದ್ಯಾರ್ಥಿಗಳಾದ ಮಹೇಶ್ವರಿ, ಲಾಸ್ಯ, ದಿಗ್ಗಜ್ ಡಿ. ಶೆಟ್ಟಿ, ನವ್ಯಾ ಹಾವಂಜೆ, ತನುಶ್ರೀ ಅವರು ಯಕ್ಷ ಶಿಕ್ಷಣದಿಂದ ಆದ ಪ್ರಯೋಜನ, ಸ್ಮರಣೀಯ ಅನುಭವ ಹಂಚಿಕೊಂಡರು. ಪ್ರಸಾಧನ ತಂಡದ ನೇತೃತ್ವ ವಹಿಸಿದ್ದ ಕೃಷ್ಣಸ್ವಾಮಿ ಜೋಯಿಸ, ಮಿಥುನ್‌ ನಾಯಕ್, ಸಂಘಟನಾ ಸಮಿತಿ ಪದಾಧಿಕಾರಿಗಳನ್ನು ಗೌರವಿಸಲಾಯಿತು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ರಾಜೀವ ಕುಲಾಲ್, ವಕೀಲ ಬೈಕಾಡಿ ಸುಪ್ರಸಾದ ಶೆಟ್ಟಿ, ಎಂ. ಗಂಗಾಧರ ರಾವ್, ಸತೀಶ ಶೆಟ್ಟಿ, ಚಂದ್ರಶೇಖರ ಎಂ. ನಾಯರಿ, ಶ್ರೀಧರ ಬಿ. ಶೆಟ್ಟಿ, ದಿನೇಶ ನಾಯರಿ, ಗುರುರಾಜ ರಾವ್, ಕಲಾರಂಗದ ಸದಸ್ಯರಾದ ಎಸ್.ವಿ.ಭಟ್, ನಾರಾಯಣ ಎಂ. ಹೆಗಡೆ, ಡಾ.ರಾಜೇಶ ನಾವುಡ, ನಟರಾಜ ಉಪಾಧ್ಯ, ನಾಗರಾಜ ಹೆಗಡೆ, ಎಚ್.ಎನ್. ವೆಂಕಟೇಶ ಭಾಗವಹಿಸಿದ್ದರು.

ಟ್ರಸ್ಟ್ ಕಾರ್ಯದರ್ಶಿ ಮುರಳಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟನಾ ಸಮಿತಿ ಅಧ್ಯಕ್ಷ ಸುಧೀರ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಉದಯ ಪೂಜಾರಿ ವಂದಿಸಿದರು. ಟ್ರಸ್ಟ್‌ ಖಜಾಂಚಿ ಗಣೇಶ ಬ್ರಹ್ಮಾವರ ನಿರೂಪಿಸಿದರು.