ಉಡುಪಿ: ಬಡಗುತಿಟ್ಟಿನ ಹಿರಿಯ ವೇಷಧಾರಿಗಳಾದ ಮಜ್ಜಿಗೆಬೈಲು ಆನಂದ ಶೆಟ್ಟಿ(78ವರ್ಷ) ಅವರು ನಿಧನರಾದರು.
ಕುಂದಾಪುರ ತಾಲೂಕಿನ ಯಡಾಡಿಯ ಸ್ವಗೃಹದಲ್ಲಿ ರಾತ್ರಿ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಪರಂಪರೆಯ ಪ್ರಾತಿನಿಧಿಕ ಪುರುಷ ಮತ್ತು ಎರಡನೆ ವೇಷಧಾರಿಯಾಗಿ ಕಲಾರಸಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಪೆರ್ಡೂರು, ಮಾರಣಕಟ್ಟೆ,ಸಾಲಿಗ್ರಾಮ,ಗೂಳಿಗರಡಿ ಮತ್ತು ದೀರ್ಘ ಕಾಲ ಮಂದಾರ್ತಿ ಮೇಳದಲ್ಲಿ ಹೀಗೆ ನಾಲ್ಕು ದಶಕಗಳ ಕಾಲ ಕಲಾಸೇವೆಗೈದ ಸಜ್ಜನ ಕಲಾವಿದರಾಗಿದ್ದರು.
ಯಕ್ಷಗಾನ ಕಲಾರಂಗ ಸಹಿತ ಹಲವಾರು ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿದ್ದವು.
ಪತ್ನಿ ,ಮೂವರು ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.ಇವರ ನಿಧನಕ್ಕೆ ಯಕ್ಷಗಾನ ಕಲಾರಂಗ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.