ADVERTISEMENT

ಶಿರ್ವ|ಸಿಡಿಲು ಬಡಿದು ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 17 ಮೇ 2020, 18:22 IST
Last Updated 17 ಮೇ 2020, 18:22 IST
ಭರತ್, ಮೃತ ಯುವಕ
ಭರತ್, ಮೃತ ಯುವಕ   

ಉಡುಪಿ: ಶಿರ್ವ ಸಮೀಪದ ಕಟಪಾಡಿಯ ಪಡು ಯೇಣಗುಡ್ಡೆಯಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು ಯುವಕ ಮೃತಪಟ್ಟಿದ್ದಾನೆ.
ಸುರೇಶ್ ಎಂಬುವರ ಪುತ್ರ ಭರತ್ ಮೃತಪಟ್ಟವರು.

ಮನೆಯಲ್ಲಿದ್ದಾಗ ಸಿಡಿಲು ಬಡಿದು ಅಸ್ವಸ್ಥಗೊಂಡ ಯುವಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಭರತ್ ಮೃತಪಟ್ಟಿದ್ದಾನೆ.
ಭಾನುವಾರ ರಾತ್ರಿ ಜಿಲ್ಲೆಯಾದ್ಯಂತ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಬಿರುಸಿನ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.