ADVERTISEMENT

‘ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಯತ್ನ’

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2018, 7:06 IST
Last Updated 26 ಮಾರ್ಚ್ 2018, 7:06 IST

ಯಲ್ಲಾಪುರ: ’ಚುನಾವಣೆಯ ಉದ್ದೇಶ ಇಟ್ಟುಕೊಂಡು ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಜನರು ಇಟ್ಟಿರುವ ಪ್ರೀತಿ– ವಿಶ್ವಾಸವನ್ನು ಉಳಿಸಿಕೊಳ್ಳಲು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಯತ್ನಿಸಿದ್ದೇನೆ’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ತಾಲ್ಲೂಕಿನ ಇಡಗುಂದಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿನ್ನಾಪುರ ಕ್ರಾಸ್ ಬಳಿ ₹3.5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಬಸ್ ತಂಗುದಾಣಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಶಿರಲೆ ಜಲಪಾತಕ್ಕೆ ಹೋಗುವ ₹ 1.5 ಕೋಟಿ ವೆಚ್ಚದ, ಕಾಂಕ್ರಿಟ್ ರಸ್ತೆಯನ್ನು ಉದ್ಘಾಟಿಸಿದರು. ₹ 50 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸುಣಜೋಗ ಕಾಂಕ್ರಿಟ್ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗಂಗಾ ಗೌಡ, ಸದಸ್ಯ ನಾಗರಾಜ ನಾಯ್ಕ, ಹಿರಿಯರಾದ ಪ್ರೇಮಾನಂದ ನಾಯ್ಕ, ಮಹಾಬಲೇಶ್ವರ ಭಟ್ಟ ಸುಣಜೋಗ, ಶಿವರಾಮ ಭಟ್ಟ, ನಾರಾಯಣ ಭಟ್ಟ, ಕೃಷ್ಣಾನಂದ ನಾಯ್ಕ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT