ADVERTISEMENT

ಗೋಕರ್ಣ ಬಂದ್ ಭಾಗಶಃ ಯಶಸ್ವಿ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2017, 7:24 IST
Last Updated 10 ಡಿಸೆಂಬರ್ 2017, 7:24 IST
ಗೋಕರ್ಣ ಬಂದ್ ಸಂದರ್ಭದಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿಗಳು ತೆರೆಯದೇ ಇರುವುದು
ಗೋಕರ್ಣ ಬಂದ್ ಸಂದರ್ಭದಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿಗಳು ತೆರೆಯದೇ ಇರುವುದು   

ಗೋಕರ್ಣ: ‘ಹೊನ್ನಾವರದ ಪರೇಶ್ ಮೇಸ್ತ ಎಂಬ ಯುವಕನ ಅನುಮಾನಾಸ್ಪದ ಸಾವಿಗೆ ನ್ಯಾಯ ಒದಗಿಸಿಕೊಡಬೇಕು’ ಎಂದು ಬಿಜೆಪಿ ಕರೆಕೊಟ್ಟಿದ್ದ ಶನಿವಾರದ ಬಂದ್‌ ಭಾಗಶಃ ಯಶಸ್ವಿಯಾಗಿದೆ.

ಘಟನೆಯ ಕುರಿತಂತೆ ಕೆಲ ಅಂಗಡಿಕಾರರು ಸ್ವಯಂ ಪ್ರೇರಿತವಾಗಿ ತಮ್ಮ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಸಂತಾಪ ಸೂಚಿಸಿ ದರು. ಬಿಜೆಪಿ ಕಾರ್ಯಕರ್ತರು ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.

ಜಿಲ್ಲಾ ಪಂಚಾಯ್ತಿ ಸದಸ್ಯೆ ಗಾಯತ್ರಿ ಗೌಡ, ಬೆಳಕು ಟ್ರಸ್ಟ್ ಅಧ್ಯಕ್ಷ ನಾಗರಾಜ ನಾಯಕ ಹಾಗೂ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಜನ್ನು ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಗಳಿಗೆ ಬೆಂಬಲ ನೀಡುತ್ತಿದೆ’ ಎಂದರು. ವಿನಾಯಕ ಗುನಗಾ, ವಸಂತ ಶೆಟ್ಟಿ, ಗಣಪತಿ ನಾಯ್ಕ, ಶೇಖರ ನಾಯ್ಕ, ಅರುಣ ಕವರಿ, ದಯಾ ನಾಯ್ಕ ತದಡಿ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.